Webdunia - Bharat's app for daily news and videos

Install App

ಕಾಂಗ್ರೆಸ್ ಖಾತೆ ಜಗಳಕ್ಕೆ ಸಿದ್ದರಾಮಯ್ಯ ಕುಮ್ಮಕ್ಕು ಕಾರಣವೇ?!

Webdunia
ಶನಿವಾರ, 9 ಜೂನ್ 2018 (08:46 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ವಂಚಿತರ ಅಸಮಾಧಾನ ಜೋರಾಗಿದ್ದು, ಇದಕ್ಕೆ ಸಿದ್ದರಾಮಯ್ಯನವರ ಕುಮ್ಮಕ್ಕು ಕಾರಣ ಎಂಬ ಆರೋಪ ಕೇಳಿಬಂದಿದೆ.

ಬಂಡಾಯವೆದ್ದಿರುವ ಶಾಸಕರ ಪೈಕಿ ಬಹುತೇಕರು ಮಾಜಿ ಸಿಎಂ ಸಿದ್ದರಾಮಯ್ಯನವರ ಆಪ್ತರೇ ಆಗಿರುವುದರಿಂದ ಅವರ ಕುಮ್ಮಕ್ಕಿನಿಂದಲೇ ಈ ಅಸಮಾಧಾನ ಹೊಗೆ ಎದ್ದಿದೆ ಎಂಬ ಆರೋಪಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿದೆ.

ಹೀಗಾಗಿ ಇದೀಗ ಕಾಂಗ್ರೆಸ್ ಹೈಕಮಾಂಡ್ ನೀವೇ ಇದನ್ನು ಬಗೆಹರಿಸಿ ಎಂದು ಸಿದ್ದರಾಮಯ್ಯಗೆ ತಾಕೀತು ಮಾಡಿದೆ ಎನ್ನಲಾಗಿದೆ. ಹೀಗಾಗಿ ಬಾದಾಮಿ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ಮರಳಿದರು ಎನ್ನಲಾಗಿದೆ.

ಆದರೆ ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಿದ್ದರಾಮಯ್ಯ, ಇಂತಹ ಆರೋಪದಲ್ಲಿ ಹುರುಳಿಲ್ಲ. ನಾನು ಯಾರಿಗೂ ಕುಮ್ಮಕ್ಕು ನೀಡಿಲ್ಲ. ಈಗ ಸಚಿವರಾಗಿರುವವರೂ ನನ್ನ ಆಪ್ತರೇ. ಎಲ್ಲರೂ ನನಗೆ ಆಪ್ತರೇ ಎಂದಿದ್ದಾರೆ. ಅಂತೂ ಕಾಂಗ್ರೆಸ್ ನಲ್ಲಿ ಎಂಬಿ ಪಾಟೀಲ್ ನೇತೃತ್ವದಲ್ಲಿ ಖಾತೆ ಕ್ಯಾತೆ ಜೋರಾಗಿರುವುದಂತೂ ಸುಳ್ಳಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments