Select Your Language

Notifications

webdunia
webdunia
webdunia
webdunia

ಅಂಬರೀಶ್ ರನ್ನು ನೆನಪಿಸಿದ ಸಿದ್ದರಾಮಯ್ಯ

ಅಂಬರೀಶ್ ರನ್ನು ನೆನಪಿಸಿದ ಸಿದ್ದರಾಮಯ್ಯ
ಬೆಂಗಳೂರು , ಶುಕ್ರವಾರ, 30 ನವೆಂಬರ್ 2018 (11:04 IST)
ಬೆಂಗಳೂರು: ಶನಿವಾರ ನಿಧನರಾದ ನಟ ಅಂಬರೀಶ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಿರಿಯ ನಟನನ್ನು ಸ್ಮರಿಸಿಕೊಂಡಿದ್ದಾರೆ.


ಫಿಲಂ ಚೇಂಬರ್ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅಂಬರೀಶ್ ನನಗೆ ಸುದೀರ್ಘ ಕಾಲದ ಗೆಳೆಯ. ಅವರ ಮಾತು ಒರಟಾದರೂ, ಹೃದಯದಿಂದ ಶ್ರೀಮಂತರಾಗಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಅಂಬರೀಶ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಅಂಬರೀಶ್, ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮೀಜಿ, ನಟರಾದ ಶಿವರಾಜ್ ಕುಮಾರ್, ರಾಕ್ ಲೈನ್ ವೆಂಕಟೇಶ್, ಫಿಲಂ ಚೇಂಬರ್ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಹಲವು ನಟ, ನಟಿಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ವಿಸ್ತರಣೆಯಾದ ದಿನವೇ ರಾಜ್ಯ ಸರ್ಕಾರ ಪತನ!