Webdunia - Bharat's app for daily news and videos

Install App

ಸಿದ್ದರಾಮಯ್ಯ ಏಟಿಗೆ ಸದಾನಂದ ಗೌಡ ತಿರುಗೇಟು: ಕರಾವಳಿಗಾಗಿ ಕಿತ್ತಾಡಿದ ನಾಯಕರು

Webdunia
ಶನಿವಾರ, 17 ನವೆಂಬರ್ 2018 (09:45 IST)
ಬೆಂಗಳೂರು: ಕರಾವಳಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿವಿ ಸದಾನಂದ ಗೌಡ ಪರಸ್ಪರ ಟ್ವಿಟರ್ ನಲ್ಲಿ ಏಟಿಗೆ ಎದಿರೇಟು ಕೊಟ್ಟಿದ್ದಾರೆ.

ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿ ಟೀಕಿಸಿದ್ದ ಸಿದ್ದರಾಮಯ್ಯ ‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರಾವಳಿಯಲ್ಲೇ ಮನೆ ಮಾಡಿದರೂ ರಾಜ್ಯದ ಜನ ಅವರಿಗೆ ಬೆಂಬಲ ನೀಡಲ್ಲ. ಕರಾವಳಿಯನ್ನು ಕರ್ನಾಟಕ ಕೋಮುವಾದದ ಪ್ರಯೋಗ ಶಾಲೆ ಮಾಡಿದೆ. ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ ಸದಾನಂದ ಗೌಡ ‘ಸರ್ ಶ್ರೀ ಸಿದ್ದರಾಮಯ್ಯನವರೇ, ಅದೇ ರೆಕಾರ್ಡ್ ಕಂಠಪಾಠ ಮಾಡಿ ಎಷ್ಟು ದಿನ ಸುತ್ತುತ್ತೀರಿ? ಚಾಮುಂಡೇಶ್ವರಿ ಮತದಾರರೇ ನಿಮ್ಮನ್ನು ನಂಬಲಿಲ್ಲ. ಇನ್ನು ಕರಾವಳಿ ಜನ ನಂಬುತ್ತಾರಾ? ಕರಾವಳಿ ಯಾಕೆ ರಾಜ್ಯದ ಜನರಿಗೂ ತಮ್ಮ ಆಯ್ಕೆ ಗೊತ್ತಿದೆ. ಇನ್ನು ಅಧಿಕಾರ ಹೊಂದಾಣಿಕೆ ನಿಮ್ಮ ಬಹುಮತಕ್ಕೆ ಬಂದದ್ದಲ್ಲ ನೆನಪಿರಲಿ’ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments