Webdunia - Bharat's app for daily news and videos

Install App

ಶ್ರೀರಾಮುಲು ವಿರುದ್ಧ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಮಾಡಿದ ಆರೋಪಗಳೇನು ಗೊತ್ತಾ?

Webdunia
ಸೋಮವಾರ, 22 ಅಕ್ಟೋಬರ್ 2018 (16:22 IST)
ಬಳ್ಳಾರಿ: ಗಣಿ ದಣಿಗಳ ನಾಡಿನಲ್ಲಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಪರ ಪ್ರಚಾರ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕ ಬಿ ಶ್ರೀರಾಮುಲು ವಿರುದ್ಧ ಸರಣಿ ಟ್ವೀಟ್ ಮಾಡಿ ಟೀಕೆ ಮಾಡಿದ್ದಾರೆ.

ಶ್ರೀರಾಮುಲುಗೆ 371 ಜಿ ಅಂದರೆ ಏನು ಅಂತಲೇ ಗೊತ್ತಿಲ್ಲ. ಅವರಿಗೆ ಗೊತ್ತಿರೋದು 326, 307,323 ಮತ್ತು 420 ಮಾತ್ರ. ಇಂತಹವರಿಗೆ ಮತ ನೀಡಿದರೆ ಕ್ಷೇತ್ರ ಲೂಟಿ ಮಾಡುತ್ತಾರಷ್ಟೆ. ಲೋಕಸಭೆ ಅಥವಾ ವಿಧಾನಸಭೆಯಲ್ಲಿ ಒಂದು ದಿನವೂ ಶ್ರೀರಾಮುಲು ಮಾತನಾಡಿಲ್ಲ. ಅವರ ಕ್ಷೇತ್ರದ ಅಭ್ಯರ್ಥಿಯಾಗಿರುವ ಜೆ ಶಾಂತಾ ಕೂಡಾ ಹಿಂದೆ ಮಾತನಾಡಿದವರಲ್ಲ. ಅಲಂಕಾರಕ್ಕೆ ಇವರನ್ನು ಅಲ್ಲಿಗೆ ಕಳುಹಿಸಬೇಕೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಲ್ಲಿ ಸ್ಪರ್ಧಿಸುತ್ತಿರುವ ಉಗ್ರಪ್ಪ ಹೊರಗಿನವರು ಎಂದು ಟೀಕಿಸಿದ ಶ್ರೀರಾಮುಲುಗೆ ತಿರುಗೇಟು ನೀಡಿದ ಅವರು ಹಾಗಿದ್ದರೆ ಹಿಂದೆ ಬಾದಾಮಿಗೆ ಬಂದು ನನ್ನ ವಿರುದ್ಧ ಪ್ರಚಾರ ಮಾಡುವಾಗ ನೀವು ಹೊರಗಿನವರಾಗಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ಕನ್ನಡ ಪದವನ್ನೇ ಸರಿಯಾಗಿ ಮಾತನಾಡಲು ಬಾರದ ಶ್ರೀರಾಮುಲು ಎಂದಾದರೂ ಲೋಕಸಭೆಯಲ್ಲಿ ಕರ್ನಾಟಕದ ಪರವಾಗಿ ಮಾತನಾಡಿದ್ದಾರೆಯೇ? ಒಂದಾದರೂ ಯೋಜನೆಯನ್ನು ಅವರಿಂದ ಬಳ್ಳಾರಿಗೆ ಬಂದಿದೆಯೇ? ರಾಜ್ಯ ದೇಶ ಗೊತ್ತಿಲ್ಲವದವರು ಲೋಕಸಭೆಗೆ ಏಕೆ ಹೋಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments