Webdunia - Bharat's app for daily news and videos

Install App

ಸಿದ್ಧರಾಮಯ್ಯ ಭಾಷಣ ಕೇಳಿ ಭಾವುಕರಾದ ಸಿಎಂ ಯಡಿಯೂರಪ್ಪ

Webdunia
ಶುಕ್ರವಾರ, 28 ಫೆಬ್ರವರಿ 2020 (09:50 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಜನ್ಮದಿನ ನಿಮಿತ್ತ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭಕ್ಕೆ ಅತಿಥಿಯಾಗಿ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣಕ್ಕೆ ಎಲ್ಲರೂ ಫಿದಾ ಆಗಿದ್ದಾರೆ.


ರಾಜಕೀಯ ವೈರುಧ್ಯ ಮರೆತು ಯಡಿಯೂರಪ್ಪ ಅಭಿನಂದನಾ ಕಾರ್ಯಕ್ರಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಭಾಷಣ ಕೇಳಿ ಸ್ವತಃ ಸಿಎಂ ಬಿಎಸ್ ವೈ ಭಾವುಕರಾದರು. ಬಳಿಕ ಸಿದ್ಧರಾಮಯ್ಯರಿಂದಲೇ ಈ ಕಾರ್ಯಕ್ರಮಕ್ಕೆ ಕಳೆ ಬಂತು ಎಂದರು.

ತಮ್ಮ ಭಾಷಣದ ವೇಳೆ ಸಿದ್ದರಾಮಯ್ಯ ಬಿಎಸ್ ವೈಗೆ ಅಭಿನಂದನೆ ಸಲ್ಲಿಸುತ್ತಾ, ನಮ್ಮಿಬ್ಬರ ರಾಜಕೀಯ ಸಿದ್ಧಾಂತಗಳು ಬೇರೆಯೇ ಇರಬಹುದು. ಆದರೆ ಅದೆಲ್ಲಕ್ಕಿಂತಲೂ ಮಾನವ ಸಂಬಂಧ ದೊಡ್ಡದು. ಅವರ ರಾಜಕೀಯ ಹೋರಾಟದಿಂದಲೇ ಮೇಲೆ ಬಂದವರು. 100 ವರ್ಷಕ್ಕೂ ಹೆಚ್ಚು ಕಾಲ ಅವರಿಗೆ ದೇವರು ಆರೋಗ್ಯ, ಆಯಸ್ಸು ಕೊಡಲಿ ಎಂದು ಸಿದ್ಧರಾಮಯ್ಯ ಹಾರೈಸಿದಾಗ ವೇದಿಕೆಯಲ್ಲಿದ್ದ ಸಿಎಂ ಯಡಿಯೂರಪ್ಪ ಭಾವುಕರಾದರಲ್ಲದೆ, ಕಣ್ಣಂಚಲ್ಲಿ ಬಂದ ಹನಿ ನೀರನ್ನು ಒರೆಸಿಕೊಂಡ ದೃಶ್ಯ ಕಂಡುಬಂತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments