Webdunia - Bharat's app for daily news and videos

Install App

ಮತ್ತೆ ಶ್ರೀರಾಮುಲು-ಸಿದ್ದರಾಮಯ್ಯ 420 ವಾರ್!

Webdunia
ಬುಧವಾರ, 24 ಅಕ್ಟೋಬರ್ 2018 (09:59 IST)
ಬೆಂಗಳೂರು: ಬಳ್ಳಾರಿ ಲೋಕಸಭೆ ಉಪಚುನಾವಣೆಯ ಕಣ ರಂಗೇರುತ್ತಿದ್ದು, ಬಿಜೆಪಿಯ ಬಿ ಶ್ರೀರಾಮುಲು ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನಡುವೆ ಮತ್ತೆ ಮಾತಿನ ಚಕಮಕಿ ಜೋರಾಗಿದೆ.

ಮೊನ್ನೆಯಷ್ಟೇ ಶ್ರೀರಾಮುಲುಗೆ 420, ಸೆಕ್ಷನ್ 326, 307 ಮುಂತಾದವು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದಿದ್ದ ಸಿದ್ದರಾಮಯ್ಯ ಮತ್ತೆ ಸರಣಿ ಟ್ವೀಟ್ ಗಳ ಮೂಲಕ ಟೀಕಾ ಪ್ರಹಾರ ಮುಂದುವರಿಸಿದ್ದಾರೆ.

ತಾನು ಲೋಕಸಭೆಯಲ್ಲಿ ಅತೀ ಹೆಚ್ಚು ಬಾರಿ ಮಾತನಾಡಿದ್ದೇನೆ ಎಂಬ ರಾಮುಲು ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ರಾಮುಲು ಒಂದು ದಿನವಾದರೂ ಮಾತನಾಡಿದ್ದಾರೆಯೇ? ಎಷ್ಟು ಬಾರಿ ಮಾತನಾಡಿದ್ದೇನೆ ಎನ್ನುವುದು ಮುಖ್ಯವಲ್ಲ. ಅದರಿಂದ ಏನು ಉಪಯೋಗವಾಗಿದೆ ಎಂದು ಮುಖ್ಯ ಎಂದಿದ್ದಾರೆ.

ನಾವು ಅಧಿಕಾರದಲ್ಲಿದ್ದಾಗ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದ್ದೇವೆ. ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೇವೆಂದು ರಾಮುಲು ಹೇಳಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಸಲು ಪ್ರಧಾನಿ ಮೋದಿಯವರ ಕೈ ಬಲ ಪಡಿಸಬೇಕೇ? ಎಂದು ಸಿದ್ದರಾಮಯ್ಯ ಚಾಟಿ ಬೀಸಿದ್ದಾರೆ.

ಇದಕ್ಕೆ ತಕ್ಕ ತಿರುಗೇಟು ನೀಡಿರುವ ರಾಮುಲು ಹಲವು ಹಿಂದೂ ಕಾರ್ಯಕರ್ತರನ್ನು ಹತ್ಯೆಗೆ ಕಾರಣವಾಗಿದ್ದಕ್ಕೆ ಸೆಕ್ಷನ್ 326, ದಕ್ಷ ಅಧಿಕಾರಿಗಳಿಗೆ ಕಿರುಕುಳ ನೀಡಿದ್ದಕ್ಕೆ ಸೆಕ್ಷನ್ 307, ಜೆಡಿಎಸ್ ನ್ನು ವಿರೋಧಿಸಿ ಈಗ ಅಧಿಕಾರಕ್ಕಾಗಿ ಅವರ ಜತೆಗೇ ಕೈ ಜೋಡಿಸಿ ಜನತೆಯನ್ನು ವಂಚಿಸಿದ್ದಕ್ಕೆ 420. ಇವು ನಿಮ್ಮ ವಿರುದ್ಧ ದಾಖಲಾಗಬೇಕಿತ್ತಲ್ಲವೇ? ಎಂದು ರಾಮುಲು ಟ್ವೀಟ್ ಮೂಲಕ ಕೆಣಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments