Select Your Language

Notifications

webdunia
webdunia
webdunia
webdunia

ಟಿಪ್ಪು ಜಯಂತಿ ತಪ್ಪಿಸಿಕೊಂಡ ಸಿಎಂ ಎಚ್ ಡಿಕೆಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ

ಟಿಪ್ಪು ಜಯಂತಿ ತಪ್ಪಿಸಿಕೊಂಡ ಸಿಎಂ ಎಚ್ ಡಿಕೆಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು , ಭಾನುವಾರ, 11 ನವೆಂಬರ್ 2018 (12:36 IST)
ಬೆಂಗಳೂರು: ವಿವಾದದ ಹಿನ್ನಲೆಯಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ವಿಶ್ರಾಂತಿ ನೆಪದಲ್ಲಿ ಗೈರು ಹಾಜರಾದ ಸಿಎಂ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡರೆ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಯಿಂದ ಸಿಎಂ ಕಾರ್ಯಕ್ರಮಕ್ಕೆ ಗೈರು ಹಾಜರಾದರು ಎಂದು ಊಹಾಪೋಹಗಳಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಮಾಡಿದ ಟ್ವೀಟ್ ಕುಮಾರಸ್ವಾಮಿಗೆ ಪರೋಕ್ಷ ಟಾಂಗ್ ಕೊಟ್ಟಂತಿದೆ.

‘ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವೊಮ್ಮೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ನಾನೂ ಮಾಡಿರಬಹುದು. ಆದರೆ ಜಾತ್ಯಾತೀತೆಯಂತಹ ಮೂಲಭೂತದ ಸಿದ್ಧಾಂತದ ವಿಚಾರದಲ್ಲಿ ನಾನು ರಾಜಿ ಮಾಡಿಕೊಳ್ಳಲಾರೆ. ಅಧಿಕಾರ ಇರುತ್ತೆ, ಹೋಗುತ್ತೆ, ಐ ಡೋಂಟ್ ಕೇರ್’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇದು ಕುಮಾರಸ್ವಾಮಿಯನ್ನು ಉದ್ದೇಶಿಸಿಯೇ ಮಾಡಿರುವ ಟ್ವೀಟ್ ಎಂದೇ ಬಣ್ಣಿಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ವಿಚ್ಛೇದನಕ್ಕಾಗಿ ಕುಟುಂಬದವರ ಜತೆಯೇ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ರಂಪಾಟ