ಮಾಜಿ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಲು ಕಾಂಗ್ರೆಸ್ ನಲ್ಲೇ ಸಿದ್ಧತೆ!

Webdunia
ಶುಕ್ರವಾರ, 20 ಜುಲೈ 2018 (10:16 IST)
ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಲು ಕಾಂಗ್ರೆಸ್ ನಲ್ಲೇ ಸಿದ್ಧತೆ ನಡೆದಿದೆ ಎನ್ನಲಾಗಿದೆ.
 

ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಸರ್ಕಾರವನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕೆಲವು ನಾಯಕರು ದೂರಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ನೀಡಲುದ್ದೇಶಿಸಿದ್ದ ಸಂಪುಟ ದರ್ಜೆ ಸ್ಥಾನಮಾನ ನೀಡಲು ಕಾಂಗ್ರೆಸ್ ನಾಯಕರಲ್ಲಿ ಅಪಸ್ವರ ಕೇಳಿಬಂದಿದೆ.

ಸಿಡಬ್ಲ್ಯುಸಿ ಸದಸ್ಯರಾಗಿಯೂ ನೇಮಕವಾಗಿರುವುದರಿಂದ ಸಿದ್ದರಾಮಯ್ಯ ಹಿಡಿತ ಪಕ್ಷದಲ್ಲಿ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಅವರಿಗೆ ಕ್ಯಾಬಿನೆಟ್ ದರ್ಜೆ ನೀಡಲು ಅಪಸ್ವರ ಕೇಳಿಬಂದಿದೆ. ಈ ನಡುವೆ ಸಂಪುಟ ದರ್ಜೆಯಿಲ್ಲದ ಸಿದ್ದರಾಮಯ್ಯಗೆ ವಿಧಾನಸೌಧದಲ್ಲಿ ಪ್ರತ್ಯೇಕ ಕಚೇರಿ ನೀಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಸದ್ಯಕ್ಕೆ ಸರ್ಕಾರಿ ಬಂಗಲೆ ಕಾವೇರಿಯಲ್ಲಿರುವ ಸಿದ್ದರಾಮಯ್ಯ ಸಂಪುಟ ದರ್ಜೆ ಇಲ್ಲದೇ ಇರುವ ಕಾರಣಕ್ಕೆ ಖಾಸಗಿ ಮನೆಗೆ ವಾಸ್ತವ್ಯ ಬದಲಿಸಲು ಚಿಂತನೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮುಂದಿನ ಸುದ್ದಿ
Show comments