Publish Date: Thu, 23 Aug 2018 (10:31 IST)
Updated Date: Thu, 23 Aug 2018 (10:33 IST)
ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಜನ ಜೀವನ ಸಂಕಷ್ಟಕ್ಕೀಡಾಗಿರುವ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಪ್ರವಾಹದಿಂದಾಗಿ ಭಾರೀ ಪ್ರಮಾಣದಲ್ಲಿ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. 11 ಗಂಟೆ ವೇಳೆಗೆ ಕುಶಾಲನಗರಕ್ಕೆ ಬರಲಿರುವ ಸಿದ್ದರಾಮಯ್ಯ ಕೆಲವು ಪರಿಹಾರ ಕೇಂದ್ರಗಳಿಗೆ ಭೇಟಿ ಕೊಡಲಿದ್ದಾರೆ.
ಮಧ್ಯಾಹ್ನದ ನಂತರ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ರಾತ್ರಿ ಇಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಸಿದ್ದರಾಮಯ್ಯ ಜತೆಗೆ ಕೆಲವು ಕಾಂಗ್ರೆಸ್ ನಾಯಕರೂ ಆಗಮಿಸುವ ನಿರೀಕ್ಷೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.