Webdunia - Bharat's app for daily news and videos

Install App

ಯಡಿಯೂರಪ್ಪ ಹೇಳಿಕೆಯಿಂದ ಬ್ಯಾಲನ್ಸ್ ಕಳೆದುಕೊಂಡ ಸಿದ್ದರಾಮಯ್ಯ: ಶೋಭಾ ಕರಂದ್ಲಾಜೆ

Webdunia
ಬುಧವಾರ, 21 ಡಿಸೆಂಬರ್ 2016 (20:03 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಯಾಲನ್ಸ್ ಕಳೆದುಕೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.
 
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತಮ್ಮ ಎಲ್ಲಾ ಸರಕಾರಿ ಕಾರ್ಯಕ್ರಮಗಳನ್ನು ಬಿಟ್ಟು ಬೆಂಗಳೂರಿನಲ್ಲಿಯೇ ಇರುತ್ತಾರೆ. ತಮ್ಮ ಸಂಪುಟದ ಮಂತ್ರಿಗಳ ಭ್ರಷ್ಟಾಚಾರದ ಕುರಿತು ಅವರಿಗೆ ಅರಿವಿದೆ ಎಂದು ಆರೋಪಿಸಿದ್ದಾರೆ.
 
ಐಟಿ ಅಧಿಕಾರಿಗಳ ಬಲೆಗೆ ಬಿದ್ದಿದ್ದ ಜಯಚಂದ್ರ ತನಿಖೆಯ ಬಳಿಕ ಕಾಂಗ್ರೆಸ್ ಶಾಸಕರಿಗೆ ನಡುಕ ಶುರುವಾಗಿದೆ. ಸದ್ಯದಲ್ಲಿಯೇ ಅವರ ಬಣ್ಣ ಬಯಲಾಗಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪು ಕಾಣಿಕೆ ನೀಡುತ್ತಿದೆ ಎಂದು ಆರೋಪಿಸಿದರು. 
 
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೊಸ ಬಾಂಬ್ ಕುರಿತು ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆ, ಕಂಪನ ರಾಹುಲ್ ಗಾಂಧಿ ಮನೆಯಿಂದಲೇ ಶುರುವಾಗಲಿದೆ. ಸದ್ಯದಲ್ಲಿಯೇ ಅವರ ಮನೆಯಲ್ಲಿ ಬಾಂಬ್ ಸಿಡಿಯುತ್ತೆ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments