Select Your Language

Notifications

webdunia
webdunia
webdunia
Thursday, 10 April 2025
webdunia

ಸಿದ್ದರಾಮಯ್ಯ ಸಿಎಂ ಆದರೆ ತಾನೇ ಭರವಸೆ ಈಡೇರಿಸುವುದು: ಬಿಸಿ ಪಾಟೀಲ್‌ ವ್ಯಂಗ್ಯ

bc patil siddaramaiah bengaluru  ಸಿದ್ದರಾಮಯ್ಯ ಬಿಸಿ ಪಾಟೀಲ್‌ ಬೆಂಗಳೂರು
bengaluru , ಗುರುವಾರ, 19 ಮೇ 2022 (17:21 IST)
ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ ಅವರು ಕೊಟ್ಟ ಭರವಸೆಯನ್ನು ಈಡೇರಿಸುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್  ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟಿದ್ದಾರೆ.
ನಾನು ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ, ಅವರು ಕೊಡುವ ಭರವಸೆ ಈಡೇರಿಸುವುದು. ಕಾಂಗ್ರೆಸ್‍ನಲ್ಲಿ ಕೂಸು ಹುಟ್ಟುವ ಮುಂಚೆ ಕುಲಾಯಿ ಹೊಲಿಸಲಾಗುತ್ತಿದೆ ಎಂದರು.
ಬಿಜೆಪಿ ಮುಂದಿನ ಭಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ ಅವರಿಗೆ ಬಿಜೆಪಿ ಬಗ್ಗೆ ಹೇಳಲು ಏನೂ ಇಲ್ಲ. ನಮ್ಮ ಸರ್ಕಾರದಿಂದ ಸಿದ್ದರಾಮಯ್ಯಗೆ ಪ್ರಯೋಜನವಾಗುತ್ತಿಲ್ಲ. ಜನರಿಗೆ ಪ್ರಯೋಜನ ಆಗುತ್ತಿದೆ ಎಂದು ವ್ಯಂಗ್ಯವಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣ 625 ಅಂಕ ಪಡೆದ 145 ವಿದ್ಯಾರ್ಥಿಗಳು!