Publish Date: Thu, 19 May 2022 (17:21 IST)
Updated Date: Thu, 19 May 2022 (17:26 IST)
ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ ಅವರು ಕೊಟ್ಟ ಭರವಸೆಯನ್ನು ಈಡೇರಿಸುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟಿದ್ದಾರೆ.
ನಾನು ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ, ಅವರು ಕೊಡುವ ಭರವಸೆ ಈಡೇರಿಸುವುದು. ಕಾಂಗ್ರೆಸ್ನಲ್ಲಿ ಕೂಸು ಹುಟ್ಟುವ ಮುಂಚೆ ಕುಲಾಯಿ ಹೊಲಿಸಲಾಗುತ್ತಿದೆ ಎಂದರು.
ಬಿಜೆಪಿ ಮುಂದಿನ ಭಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ ಅವರಿಗೆ ಬಿಜೆಪಿ ಬಗ್ಗೆ ಹೇಳಲು ಏನೂ ಇಲ್ಲ. ನಮ್ಮ ಸರ್ಕಾರದಿಂದ ಸಿದ್ದರಾಮಯ್ಯಗೆ ಪ್ರಯೋಜನವಾಗುತ್ತಿಲ್ಲ. ಜನರಿಗೆ ಪ್ರಯೋಜನ ಆಗುತ್ತಿದೆ ಎಂದು ವ್ಯಂಗ್ಯವಾಡಿದರು.
geetha
Publish Date: Thu, 19 May 2022 (17:21 IST)
Updated Date: Thu, 19 May 2022 (17:26 IST)