Select Your Language

Notifications

webdunia
webdunia
webdunia
webdunia

ವೀರಪ್ಪ ಮೊಯ್ಲಿ ಟ್ವೀಟ್ ಗೆ ಕೆಂಡಮಂಡಲವಾದ ಸಿಎಂ ಸಿದ್ದರಾಮಯ್ಯ

ವೀರಪ್ಪ ಮೊಯ್ಲಿ ಟ್ವೀಟ್ ಗೆ ಕೆಂಡಮಂಡಲವಾದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶುಕ್ರವಾರ, 16 ಮಾರ್ಚ್ 2018 (12:48 IST)
ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಬಗ್ಗೆ ವೀರಪ್ಪ ಮೊಯ್ಲಿ ಅವರ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ಅವರು ಕೆಂಡಮಂಡಲವಾಗಿದ್ದಾರೆ.


ಟಿಕೆಟ್ ಹಂಚಿಕೆ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಿತ್ತು. ಬಹಿರಂಗವಾಗಿ ಟಿಕೆಟ್ ವಿಚಾರ ಚರ್ಚೆ ಮಾಡಿರುವುದು ತಪ್ಪು ಎಂದು  ಮೊಯ್ಲಿ ಅವರ ವಿರುದ್ದ ಹೈಕಮಾಂಡ್ ಗೆ ದೂರು ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ. ಹಾಗೇ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಬೆಳಿಗ್ಗೆ ದೂರವಾಣಿ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವುದರ ಜೊತೆಗೆ ಚರ್ಚೆ ಕೂಡ ನಡೆಸಿ ಎಐಸಿಸಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಪಕ್ಷ ಮತ್ತು ಸರ್ಕಾರದ ವಿರುದ್ದ ನಾಯಕರ ಬಹಿರಂಗ ಹೇಳಿಕೆಗೆ ಕಡಿವಾಣ ಹಾಕುವಂತೆ ಕೆ.ಸಿ.ವೇಣುಗೋಪಾಲ್ ಗೆ ತಿಳಿಸಿರುವುದಾಗಿ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಾಲಿಬಾನ್ ಉಗ್ರರಿಗೆ ಕದ್ದುಮುಚ್ಚಿ ಬೆಂಬಲ ನೀಡುತ್ತಿರುವ ಪಾಕಿಸ್ತಾನ!