ಸಿಎಂ ಆಗಿ ಮುಂದುವರಿಯಲು ಬಿಎಸ್ ವೈ ಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

Webdunia
ಮಂಗಳವಾರ, 19 ನವೆಂಬರ್ 2019 (10:35 IST)
ಮೈಸೂರು : ಮೈಸೂರಿನಲ್ಲಿ ಬಿಜೆಪಿ ನಾಯಕ ಯೋಗೇಶ್ವರ್ ಹೆಸರಿನಲ್ಲಿ 30 ಸಾವಿರ ಸೀರೆ ಸಿಕ್ಕಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಹಣದ ಮೂಲಕ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಅವರ  ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.




ಮೈಸೂರಿನಲ್ಲಿ 30 ಸೀರೆಗಳು ಸಿಕ್ಕಿವೆ. ಅದು ಯಾರದ್ದು? ಕಾನೂನಿನಲ್ಲಿ ಸೀರೆಗಳನ್ನು ಹಂಚುವುದಕ್ಕೆ ಅವಕಾಶವಿದ್ಯಾ? ಸರ್ಕಾರದಲ್ಲಿ ಇದ್ದುಕೊಂಡು ಅವರು ಅಕ್ರಮ ಮಾಡುತ್ತಾರೆ. ಅವರಿಗೆ ಯಾವ ನೈತಿಕತೆ ಇದೆ. ಸಿಎಂ ಆಗಿ ಮುಂದುವರಿಯಲು ಬಿಎಸ್ ವೈ ಗೆ ಯಾವ ನೈತಿಕತೆ ಇದೆ. ಅವರು ಚುನಾವಣಾ ಕಣದಲ್ಲಿ ಇರುವುದಕ್ಕೆ ಅರ್ಹರಾ? ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಹಾಗೇ ಶ್ರೀರಾಮುಲು ನನ್ನ ವಿರುದ್ಧ ಸೋತು ಹತಾಶರಾಗಿದ್ದಾರೆ. ಮಾನ ಮರ್ಯಾದೆ ಇದ್ದಿದ್ದರೆ ರಾಜೀನಾಮೆ ನೀಡಬೇಕಿತ್ತು.   ಡಿಸಿಎಂ ಮಾಡ್ತಾರೆಂದು ಪ್ರಚಾರ ಮಾಡಿಕೊಂಡಿದ್ದರು. ಆದರೆ ಶಾಸಕರಲ್ಲದವರಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಎಸ್ ಟಿಗೆ ಶೇ.7ರಷ್ಟು ಮೀಸಲಾತಿ ನೀಡದಿದ್ರೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಆದ್ರೆ ಈಗ ಏನಾಗಿದೆ ಎಂದು ಶ್ರೀರಾಮುಲು ವಿರುದ್ಧ ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments