ಮೋದಿ, ಅಮಿತ್ ಶಾ ಬಗ್ಗೆ ವ್ಯಂಗ್ಯವಾಡಿದ ಸಿದ್ದರಾಮಯ್ಯ

Webdunia
ಮಂಗಳವಾರ, 25 ಡಿಸೆಂಬರ್ 2018 (10:50 IST)
ಬೆಂಗಳೂರು : ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ಹಿನ್ನಲೆಯಲ್ಲಿ ಇನ್ನುಮುಂದೆ ದೇಶದಲ್ಲಿ ಮೋದಿಯ ಮೋಡಿ ಹಾಗೂ ಅಮಿತ್ ಶಾ ಮ್ಯಾಜಿಕ್ ಎಲ್ಲವೂ ಬರಿ ಕನಸಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.


ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ‘ಪಂಚರಾಜ್ಯ ಚುನಾವಣೆಯಲ್ಲಿ ಸೋಲನ್ನು ಕಂಡಿರುವ ಬಿಜೆಪಿಗೆ ರಾಷ್ಟ್ರದಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಡಬೇಕಾದ ದುಸ್ಥಿತಿ ಬಂದಿದೆ. ದೇಶದಲ್ಲಿ ಪ್ರಧಾನಿ ಮೋದಿಯವರ ವರ್ಚಸ್ಸು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಹೀಗಾಗಿ ಇನ್ನುಮುಂದೆ ದೇಶದಲ್ಲಿ ಮೋದಿಯ ಮೋಡಿ ಹಾಗೂ ಅಮಿತ್ ಶಾ ಮ್ಯಾಜಿಕ್ ಎಲ್ಲವೂ ಬರಿ ಕನಸಷ್ಟೇ’ ಎಂದು ಹೇಳಿದ್ದಾರೆ.


‘ಈಗಾಗಲೇ ಕಾಂಗ್ರೆಸ್ ಜಯಗಳಿಸಿರುವ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡಲಾಗಿದೆ. ಈ ಹಿಂದೆ ಅಧಿಕಾರಕ್ಕೆ ಬಂದರೇ, ದೇಶದ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದ ಬಿಜೆಪಿ, ರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷಗಳಾದರೂ ಬಡ ರೈತರ ಕಡೆಗೆ ಕಣ್ಣೆತ್ತಿಯೂ ನೋಡುತ್ತಿಲ್ಲ. ಬಡವರ ಕಷ್ಟಕ್ಕೆ ಮಿಡಿಯದ ಈ 56 ಇಂಚಿನ ಎದೆಯಿದ್ದು ಏನು ಉಪಯೋಗ’ವೆಂದು ಕಿಡಿಕಾರಿದ್ದಾರೆ.


‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವುದು ಎಷ್ಟು ಸತ್ಯವೋ, ರಾಹುಲ್ ಗಾಂಧಿ ಪ್ರಧಾನಿಯಾಗುವುದು ಅಷ್ಟೇ ಸತ್ಯ’ ಎಂದು ಅವರು ಭವಿಷ್ಯ ನುಡಿದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

8,931ದೀರ್ಘಾವಧಿ ಮುಖ್ಯಸ್ಥರಾಗಿ ಹೊಸ ದಾಖಲೆ ಬರೆದ ಪ್ರಧಾನಿ ನರೇಂದ್ರ ಮೋದಿ

ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆ, ವರದಕ್ಷಿಣೆಗಾಗಿ ಪತ್ನಿಯ ಕೊಲೆ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿಕೆ ಶಿವಕುಮಾರ್

ಬೇರೆ ವಿದ್ಯಾರ್ಥಿಯ ಬೆಡ್ ನಲ್ಲಿ ಮಲಗಿದ್ದಕ್ಕೆ ಇಂಥಾ ಶಿಕ್ಷೆಯೇ: ಹಾಸ್ಟೆಲ್ ವಾರ್ಡನ್ ಕ್ರೌರ್ಯದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments