Webdunia - Bharat's app for daily news and videos

Install App

ರಾಜ್ಯ ಬಜೆಟ್: ಚುನಾವಣೆ ದೃಷ್ಟಿಯಿಂದ ಜನಪ್ರಿಯ ಬಜೆಟ್ ಮಂಡಿಸುತ್ತಾರಾ ಸಿದ್ದರಾಮಯ್ಯ..?

Webdunia
ಮಂಗಳವಾರ, 14 ಮಾರ್ಚ್ 2017 (16:14 IST)
ರಾಜ್ಯಾದ್ಯಂತ ಬರದ ಛಾಯೆ, ಜನರಷ್ಟೇ ಅಲ್ಲ, ನೀರು ಆಹಾರಕ್ಕಾಗಿ ಪ್ರಾಣಿಗಳ ಪರದಾಟ. ಬೆಳೆದ ಬೆಳೆ ಹಾಳಾಗಿ ಸಾಲ ತೀರಿಸಲಾಗದೇ ದಿಕ್ಕೆಟ್ಟಿರುವ ರೈತ ಹೀಗೆ ಹತ್ತು ಹಲವು ಸವಾಲುಗಳ ನಡುವೆ ನಾಳೆ ಸಿಎಂ ಸಿದ್ದರಾಮಯ್ಯ ರಾಜ್ಯ ಹಣಕಾಸು ಬಜೆಟ್ ಮಂಡಿಸುತ್ತಿದ್ದಾರೆ.

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆ, ಮುಂದಿನ ವರ್ಷ ರಾಜ್ಯ ವಿಧಾನಸಭೆ ಗುರಿಯಾಗಿಸಿಕೊಂಡು ಸಿಎಂ ಸಿದ್ದರಾಮಯ್ಯ ಜನಪ್ರಿಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಪಂಚರಾಜ್ಯಗಳ ಚುನಾವಣೆಯಲ್ಲಿ ಪಂಜಾಬ್ ಹೊರತುಪಡಿಸಿ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಗದ್ದುಗೆ ಏರಲು ಸಾಧ್ಯವಾಗಿಲ್ಲ. ಹೀಗಾಗಿ, ಕೈಯಲ್ಲಿರುವ ದೊಡ್ಡ ರಾಜ್ಯ ಕರ್ನಾಟಕವಾಗಿದ್ದು, ಇಲ್ಲಿ ಅಧಿಕಾರ ಉಳಿಸಿಕೊಳ್ಳುವ ಒತ್ತಡದಲ್ಲಿದೆ ಕಾಂಗ್ರೆಸ್. ಹೀಗಾಗಿ, ಸಿಎಂ ಜನರ ಓಲೈಕೆಗೆ ಮುಂದಾಗುವ ಎಲ್ಲ ಸಾಧ್ಯತೆ ಇದೆ.
ಈಗಾಗಲೇ ಸಿಎಂ ಮಂಗಳವಾರವೇ ಬರದಿಂದ ಕಂಗೆಟ್ಟಿರುವ ರೈತರಿಗೆ ಪರಿಹಾರವಾಗಿ 671 ಕೋಟಿ ರೂಪಾಯಿ ರಿಲೀಸ್ ಮಾಡಿದ್ದಾರೆ.

ರೈತರ ಸಾಲ ಮನ್ನಾ..?: ರಾಜ್ಯದಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ರೈತರು ಸಹಕಾರ ಬ್ಯಾಂಕ್`ಗಳಲ್ಲಿ ಪಡೆದಿರುವ 25 ಸಾವಿರದವರೆಗಿನ ಸಾಲ ಮನ್ನಾ ಮಾಡುವ ಯೋಜನೆ ಘೋಷಿಸುವ ಸಾಧ್ಯತೆ ಇದೆ. ಇದರಿಂದ 10 ಲಕ್ಷ ರೈತರು ಸಂಪೂರ್ಣ ಸಾನಮನ್ನಾದ ಅನುಕೂಲ ಪಡೆಯಲಿದ್ದು, ಹೆಚ್ಚು ಸಾಲವಿರುವ ಉಳಿದ ರೈತರಿಗೆ 25 ಸಾವಿರದವರೆಗಿನ ಸಾಲಮನ್ನಾ ಆಗಲಿದೆ ಎನ್ನಲಾಗಿದೆ.

ಇದರ ಜೊತೆಗೆ ಎಸ್`ಸಿ, ಎಸ್`ಟಿಗೆ ಉಚಿತ ವಿದ್ಯುತ್, ವಸತಿ ಯೋಜನೆ ಸೇರಿದಂತೆ ಪ್ರಣಾಳಿಕೆಯಲ್ಲಿ ಘೋಷಿಸಿ ಈಡೇರಿಸದೇ ಉಳಿದಿರುವ ಯೋಜನೆಗಳ ಬಗ್ಗೆ ಹೆಚ್ಚು ಗಮನಹರಿಸುವ ಸಾಧ್ಯತೆ ಇದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮೇಘಾಲಯ ಹನಿಮೂನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಇಲ್ಲಿದೆ ಡೀಟೈಲ್ಸ್

ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಕಟ ವೇಳೆ ತಂದೆ ಎಚ್ ಡಿ ರೇವಣ್ಣ, ಭವಾನಿ ಎಲ್ಲಿದ್ದಾರೆ

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್ ನಲ್ಲಿ ಹೂತ ಬಾಲಕಿ ಬಗ್ಗೆ ದೂರುದಾರನ ವಿವರಣೆ ಹೇಗಿತ್ತು

ಮುಂದಿನ ಸುದ್ದಿ
Show comments