Webdunia - Bharat's app for daily news and videos

Install App

ಸಿದ್ದು ಆಡಳಿತ ಸ್ವಯಂ ಪ್ರೇರಿತ ಅಪರಾಧ-C.M. ಇಬ್ರಾಹಿಂ

Webdunia
ಮಂಗಳವಾರ, 22 ನವೆಂಬರ್ 2022 (18:54 IST)
ಅವರು ಮಾತ್ರ ಮುಂದೆ ಬಾಯಿ ಅಲ್ಲಾಡಿಸುತ್ತಿದ್ದರು ಎಂದು JDS ರಾಜ್ಯಾಧ್ಯಕ್ಷ C.M. ಇಬ್ರಾಹಿಂ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಇಬ್ರಾಹಿಂ, ಸಿದ್ದರಾಮಯ್ಯ ಅವರು ಆಡಳಿತ ಮಾಡಿದ್ದು ಸ್ವಯಂ ಪ್ರೇರಿತ ಅಪರಾಧ. ಹೀಗಾಗಿ ಕ್ಷೇತ್ರ ಹುಡುಕಾಟ ಮಾಡುತ್ತಿದ್ದಾರೆ. ಸಿಎಂ ಆಗಿದ್ದವರು 40 ಸಾವಿರ ಮತಗಳ ಅಂತರದಲ್ಲಿ ಸೋತರು. ಅವರನ್ನು ಬಾದಾಮಿಗೆ ಕರೆದುಕೊಂಡು ಹೋಗಿದ್ದೇ ನಾನು ಎಂದು ತಿಳಿಸಿದರು. ಇದೇ ವೇಳೆ ಪಂಚರತ್ನ ಯಾತ್ರೆ ಬಗ್ಗೆ ತಿಳಿಸಿದ ಇಬ್ರಾಹಿಂ, ಆರೋಗ್ಯ, ಶಿಕ್ಷಣ, ನೀರಾವರಿಗಾಗಿ ಪಂಚರತ್ನ ಯಾತ್ರೆ ನಡೆಯುತ್ತಿದೆ. ಯಾತ್ರೆ ಹಳೇ ಮೈಸೂರು ಭಾಗದಲ್ಲಿ ಜೋರಾಗಿದೆ. JDS ಅಧಿಕಾರಕ್ಕೆ ಬಂದರೆ 5 ವರ್ಷಗಳಲ್ಲಿ ಏನು ಮಾಡುತ್ತೇವೆ ಎಂಬುದನ್ನು ತಿಳಿಸುವುದೇ ಕಾರ್ಯಕ್ರಮದ ಉದ್ದೇಶ. ಒಂದು ವೇಳೆ 5 ವರ್ಷಗಳಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸದೇ ಹೋದರೆ 2028ರಲ್ಲಿ ನಾವು ನಿಮ್ಮಲ್ಲಿ ಮತ ಕೇಳಲು ಬರುವುದಿಲ್ಲ ಎಂದು ಹೇಳಿಕೆ ನೀಡಿದರು. ನಮ್ಮ ಪ್ರಣಾಳಿಕೆಯ ಎಲ್ಲಾ ಯೋಜನೆಗಳಿಗೆ 5 ವರ್ಷಗಳಲ್ಲಿ 5 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಜನರು ಈ ಬಾರಿ ನಮಗೆ ಆಶೀರ್ವಾದ ಮಾಡಿದರೆ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೆವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments