Webdunia - Bharat's app for daily news and videos

Install App

ಸೋಲು ಕಾಣುತ್ತಿರುವುದರ ಭಯಕ್ಕೆ ಮೋದಿ ಏನೇನೋ ಮಾತನಾಡುತ್ತಿದ್ದಾರೆ: ಸಿದ್ದರಾಮಯ್ಯ

Krishnaveni K
ಸೋಮವಾರ, 27 ಮೇ 2024 (14:37 IST)
ಬೆಂಗಳೂರು : ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್ ಡಿ ಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ ಎಂದು ವ್ಯಂಗ್ಯವಾಡಿದರು. 

KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. 
 
ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂದರು. 
 
ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರೂ, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌. ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು , ದೇಶದ ಕೈಗಾರಿಕೆಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ ಎಂದರು. 
 
ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದರು. 
 
ತಮ್ಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು  ಪಾರ್ಲಿಮೆಂಟಿನಲ್ಲಿ ಕುಳಿತು ನೆಹರೂ ಆಲಿಸುತ್ತಿದ್ದರು. ಸ್ಪಂದಿಸುತ್ತಿದ್ದರು‌. ಇದು ನೆಹರೂ ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ ಎಂದರು. 
 
ನಮ್ಮ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಸರಣಿ ಸುಳ್ಳುಗಳನ್ನು ಹೇಳುತ್ತಿದೆ. 
 
28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ 
 
ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ ಲೋಕಸಭೆಯಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆದ್ದೇ ಗೆಲ್ಲುತ್ತದೆ. 28 ಕ್ಕೆ 28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿ ಬಾಯಿ ಬಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ತಿರಸ್ಕೃತಗೊಂಡಿದೆ ಎಂದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments