ಸಿದ್ದರಾಮಯ್ಯ ನೀಡಿದ ಕಷಾಯ- ಹೆಚ್‍ಡಿಕೆಗೆ ಜೀರ್ಣವಾಗ್ತಿಲ್ಲ ಎಂದವರಾರು?

Webdunia
ಭಾನುವಾರ, 8 ಜುಲೈ 2018 (18:11 IST)
ಒಂದು ವರ್ಷ ಸರಕಾರವಿರುತ್ತದೆಂದು ಕುಮಾರಸ್ವಾಮಿ ಹೇಳಿದರೆ 6 ತಿಂಗಳು ಇರುತ್ತದೆಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ನೀಡಿದ ಕಷಾಯವನ್ನು ಇನ್ನೂ ಕೂಡ ಕುಮಾರಸ್ವಾಮಿ ಜೀರ್ಣಿಸಲು ಆಗಿಲ್ಲ. ಈ ಸರಕಾರ ಬಹಳಷ್ಟು ದಿನ ಬದುಕುವುದು ಕಷ್ಟವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕುಂದಾಪುರದ ಬಿಜೆಪಿ ಕಚೇರಿಯಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಣಾಳಿಕೆಯಲ್ಲಿ ಹೇಳಿದಂತೆ ಸಂದ್ಯಾ ಸುರಕ್ಷ, ವ್ರದ್ಧಾಪ್ಯ ವೇತನ ವಿಚಾರ ಮರೆತಿದ್ದಾರೆ. ಇಂದಿರಾ ಕ್ಯಾಂಟಿನ್ ಮುಂದುವರೆಸುವುದಾಗಿ ಹೇಳಿದ್ದು ಬಹಳಷ್ಟು ಇಂದಿರಾ ಕ್ಯಾಂಟಿನ್ ನಡೆಯುತ್ತಿಲ್ಲ.  ಬಜೆಟಿನಲ್ಲಿ ಕೊಟ್ಟ ಭರವಸೆ, ಹೇಳಿಕೆ ಮರೆತ ಸರಕಾರವು ನಿಷ್ಕ್ರೀಯವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೂ ಸತ್ತಿದೆ. ಸರಕಾರ ಇದನ್ನು ತಿದ್ದಿಕೊಳ್ಳದಿದ್ದಲ್ಲಿ ಸದನದ ಒಳಗೂ ಮತ್ತು ಹೊರಗು ಪ್ರತಿಭಟನೆ ನಡೆಸುವ ಕಾರ್ಯಕ್ರಮ ನಿಶ್ಚಿತ ಎಂದರು. 

ಹೆಬ್ರಿ ಪೊಲೀಸ್ ಉಪನಿರೀಕ್ಷಕ ರಾಜಿನಾಮೆ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಗ್ರಹಮಂತ್ರಿಗಳಿಗೆ ಪತ್ರ ಬರೆದಿದ್ದು ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವ ಕಾರ್ಯವಾಗುವುದು ತಪ್ಪು. ಅಧಿಕಾರಿ ತಪ್ಪು ಮಾಡಿದರೇ ಅದನ್ನು ಇಲಾಖೆ ತನಿಖೆಯ ಮೂಲಕ ಸರಿಪಡಿಸುವ ವ್ಯವಸ್ಥೆಯಿದೆ. ಆದರೇ ಸ್ವಯಂಪ್ರೇರಿತವಾಗಿ ಠಾಣಾಧಿಕಾರಿ ರಾಜಿನಾಮೆ ನೀಡಿದರೇ ಸರಕಾರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಾದರೂ ಯಾರು? ಎಂಬ ಬಗ್ಗೆ ಇನ್ನೂ ಕೂಡ ಧ್ವನಿಯೆತ್ತುವೆ ಎಂದರು.

 ಬಜೇಟಿನಲ್ಲಿ ಕರಾವಳಿಯ ಮೂರು ಜಿಲ್ಲೆಗಳ ಕಡೆಗಣನೆಯಾಗಿದೆ. ಎತ್ತಿನಹೊಳೆಗೆ ಅನುದಾನ ನೀಡಿದ್ದು ಈ ಬಗ್ಗೆ ನಮ್ಮ ಆಕ್ಷೇಪವಿಲ್ಲ. ಆದರೆ ಆ ಯೋಜನೆಯಿಂದ ಬಾದಕವಾಗುವ ಉಡುಪಿ, ಮಂಗಳೂರು ಜಿಲ್ಲೆಗೆ ಯಾವುದೇ ಅನುದಾನ ನೀಡದಿರುವುದು ಸರಿಯಲ್ಲ. ಕೂಡಲೇ ವಾರಾಹಿ ಯೋಜನೆಗೆ 250-500 ಕೋಟಿ ನೀಡಿ ಯೋಜನೆ ಉಡುಪಿಗೆ ತಲುಪವಷ್ಟರ ಮಟ್ಟಿಗೆ ಭೂಸ್ವಾಧೀನ ಮೊದಲಾದ ಕೆಲಸ ಆಗಲು ವ್ಯವಸ್ಥೆ ಕಲ್ಪಿಸಬೇಕಿದೆ. ಉಡುಪಿ ಜಿಲ್ಲೆಗೆ ಇನ್ನೂ ಕೂಡ ಉಸ್ತುವಾರಿ ಸಚಿವರನ್ನು ನೇಮಿಸದಿರುವುದು ನಿಜಕ್ಕೂ ದುರಂತವಾಗಿದೆ.  ನೆರೆ, ಮಳೆಹಾನಿ  ಬಡವರ ಮನೆ ಬಿದ್ದರೆ ಅದಕ್ಕೆ 1 ಸಾವಿರ ನೀಡುವುದಲ್ಲ, ಬದಲಾಗಿ ಅದರ ಪೂರ್ಣ ವೆಚ್ಚ ನೀಡಬೇಕಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ.  ಮುಖ್ಯಮಂತ್ರಿಗಳ ಬಳಿ ಈ ಬಗ್ಗೆ ಮಾತನಾಡುವೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments