Webdunia - Bharat's app for daily news and videos

Install App

ಸಿದ್ದು ಹೆಚ್. ಡಿ. ಕೆ. ಮೀಟಿಂಗ್

Webdunia
ಗುರುವಾರ, 10 ಮಾರ್ಚ್ 2022 (16:09 IST)
ವಿಷಯಾಂತರ ಮಾಡಿ ರಾಜಕೀಯ ಭಾಷಣ ಮಾಡಬಹುದಾದರೆ ನಾನು 10 ದಿನ ಮಾತನಾಡಬಲ್ಲೆ‌ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲೆಸೆದರೆ, ಬಜೆಟ್​ಗೆ ಸಂಬಂಧಿಸಿದ ವಿಷಯವೇ ಪ್ರಸ್ತಾಪಿಸಿರುವೆ. ರಾಜಕೀಯ ಭಾಷಣ ಮಾಡುವುದಾದರೆ ನಾನೂ ಒಂದು ವರ್ಷ ಮಾತನಾಡಬಲ್ಲೆ ಎಂದು ಮಾಜಿ ಸಿಎಂ, ಜೆಡಿಎಸ್ ನ ಎಚ್.ಡಿ.ಕುಮಾರಸ್ವಾಮಿ ಪ್ರತಿ ಸವಾಲು ಹಾಕಿದರು.
 
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಮುಂದುವರಿಸಿದ ಎಚ್.ಡಿ.ಕುಮಾರಸ್ವಾಮಿ, ಈಗಲ್ ಟನ್ ಜಮೀನು ವಿವಾದ ಪ್ರಸ್ತಾಪಿಸಿ, ಪರೋಕ್ಷವಾಗಿ ಕಾಂಗ್ರೆಸ್ ಆಡಳಿತಾವಧಿಯ ಲೋಪ- ದೋಷಗಳನ್ನು ಪ್ರಸ್ತಾಪಿಸಿದರು. ಪರ್ಸೆಂಟೇಜ್, ಅಕ್ರಮಗಳು ನಡೆದಿವೆ.
ಬಜೆಟ್ ಗೆ ಸಂಬಂಧಪಡದ ವಿಷಯವೆಂದ ಸಿದ್ದರಾಮಯ್ಯ ನೀವು ಅಧಿಕಾರದಲ್ಲಿದ್ದಾಗ ಈ ಬಗ್ಗೆ ಕ್ರಮವಹಿಸಬಹುದಿತ್ತು. ಈಗ ನಾವಂತೂ ಅಧಿಕಾರದಲ್ಲಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ‌ ಅವರು ಯಾವುದೇ ರೀತಿಯ ತನಿಖೆ ನಡೆಸಲಿ. ತಪ್ಪುಗಳು ದೃಢಪಟ್ಟರೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಲಿ ಎಂದರು.,
 
ಈ ಮಧ್ಯೆ ಎಚ್ ಡಿಕೆ ವಿರುದ್ಧ ಏರಿದ ಧ್ವನಿಯಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ‌ ಸಿದ್ದರಾಮಯ್ಯ ಹರಿಹಾಯ್ದರೆ, ದಾಖಲೆ ಸಹಿತ ನಿಜಾಂಶ ಮಾತನಾಡಿದರೆ‌ ಸಿಟ್ಟು ಬರುತ್ತದೆ ಎಂದು ಕುಮಾರಸ್ವಾಮಿ ತಿವಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments