Webdunia - Bharat's app for daily news and videos

Install App

ಸಿದ್ದು ಹೇಳಿಕೆಯನ್ನ ತಿರುಚಿ ಹೇಳಲಾಗುತ್ತಿದೆ

Webdunia
ಸೋಮವಾರ, 24 ಏಪ್ರಿಲ್ 2023 (17:30 IST)
ಲಿಂಗಾಯತ ಸಿಎಂ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಗೋಕಾಕ್​​ನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯನ್ನು ತಿರುಚಿ ಹೇಳಲಾಗುತ್ತಿದೆ. ಬಿಜೆಪಿಯವರು ಭಾವನಗೆಳನ್ನು ಕೆರಳಿಸುವ ಯತ್ನ ಮಾಡುತ್ತಿದ್ದಾರೆ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಪರ ಮಾಜಿ ಡಿಸಿಎಂ ಲಕ್ಷ್ಮಣ​​​​​ ಸವದಿ ಬ್ಯಾಟ್​​​​​ ಬೀಸಿದ್ದಾರೆ. ಇದೇ ವೇಳೆ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್​​​ ಕಮಿಷನ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ ಎಂದು ಹೇಳಿದ್ರು. ಮಾಜಿ ಸಿಎಂ ಜಗದೀಶ್​​ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್​​ ಸವದಿ ಪಕ್ಷ ಬಿಟ್ಟಿದ್ದು ಸಮುದ್ರದಲ್ಲಿನ ಒಂದು ಲೋಟ ನೀರು ತೆಗೆದಂತೆ ಎಂಬ ಬಿಜೆಪಿಗರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ರು. ಅವರಿಗೆ ನಾವು ಒಂದು ಲೋಟ ನೀರೇ ಇರಬಹುದು. ಚುನಾವಣೆ ಆದ ಬಳಿಕ ಗೊತ್ತಾಗುತ್ತೆ ನಾವು ತಂಬಿಗೆ ನೀರೋ, ಬಕೆಟ್ ನೀರೋ, ಯಾವ ನೀರು ಅಂತ ಗೊತ್ತಾಗುತ್ತೆ. ಗೋಕಾಕ್​​ ಚುನಾವಣೆಯಲ್ಲಿ ಈ ಬಾರಿ ಮೌನ ಕ್ರಾಂತಿ ಆಗುತ್ತೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments