Select Your Language

Notifications

webdunia
webdunia
webdunia
webdunia

‘ಸಿದ್ದು ದಾಖಲೆಯನ್ನ ಬಿಡುಗಡೆ ಮಾಡ್ಲಿ’

'Siddu should release the record'
ಸಿದ್ದರಾಮೋತ್ಸವಕ್ಕೆ 75 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅಷ್ಟೊಂದು ಹಣ ಸಿದ್ದರಾಮಣ್ಣ ಅವರಿಗೆ ಎಲ್ಲಿಂದ ಬಂತು ಎಂದು BJP ರಾಜ್ಯಾಧ್ಯಕ್ಷ  ನಳೀನ್​​ ಕುಮಾರ್​​​ ಕಟೀಲ್​​ ಪ್ರಶ್ನಿಸಿದ್ದಾರೆ. ಅವರ ಇತಿಹಾಸ ನೋಡಿ, ಸಿದ್ದರಾಮಯ್ಯ ಶ್ರೀಮಂತ ಕುಟುಂಬದಿಂದ ಬಂದಿಲ್ಲ. ಆದರೂ ಅಷ್ಟೊಂದು ಹಣ ಖರ್ಚು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಟೀಲ್​​​ ವಾಗ್ದಾಳಿ ನಡೆಸಿದ್ರು. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, BJP ಸರ್ಕಾರ ಭ್ರಷ್ಟಾಚಾರ ಮಾಡಿದೆ ಅಂತ ಹೇಳುತ್ತಾರೆ. ಕಾಂಗ್ರೆಸ್​​​ನವರ ಬಳಿ ಯಾವ ದಾಖಲೆಗಳು ಇವೆ. ಸಿದ್ದರಾಮಯ್ಯ ಹತ್ತಿರ ದಾಖಲೆ ಇದ್ರೆ ಬಿಡುಗಡೆ ಮಾಡ್ಲಿ ಎಂದು ಕಟೀಲ್​​ ಸವಾಲೆಸೆದ್ರು. ಕೊರೋನಾ ಲಸಿಕೆಯಲ್ಲಿ ದೇಶ ಕ್ರಾಂತಿ ಮಾಡಿದೆ. ಆದರೆ ಕಾಂಗ್ರೆಸ್ ಕೊರೋನಾ ಲಸಿಕೆಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಮೂವರು ಭಯೋತ್ಪಾದಕರ ಹತ್ಯೆ