ಗುಲಾಂ ನಬೀ ಆಜಾದ್ ವಿರುದ್ಧ ಸಿದ್ದು ಟ್ವೀಟ್

Webdunia
ಭಾನುವಾರ, 28 ಆಗಸ್ಟ್ 2022 (14:15 IST)
50 ವರ್ಷಗಳ ಕಾಲ ಪಕ್ಷದಿಂದಲೇ ಅಧಿಕಾರ-ಅವಕಾಶಗಳನ್ನು ಪಡೆದ ಆಜಾದ್ ಉಂಡ ಮನೆಗೆ ಎರಡು ಬಗೆಯಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಇಂದು ಸರಣಿ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಒಳ್ಳೆಯ ದಿನಗಳಲ್ಲಿ ಅಧಿಕಾರ-ಅವಕಾಶಗಳನ್ನು ಅನುಭವಿಸಿರುವ ಗುಲಾಂ ನಬೀ ಆಜಾದ್, ಕಷ್ಟದ ಕಾಲದಲ್ಲಿ ಪಕ್ಷದ ಜೊತೆಗೆ ನಿಲ್ಲಬೇಕಾಗಿರುವುದು ಕರ್ತವ್ಯವಾಗಿತ್ತು. ಆದರೆ ಆಜಾದ್ ಅವರು ಪಕ್ಷದ ಕಷ್ಟದ ಕಾಲದಲ್ಲಿಯೇ ಕುಂಟು ನೆಪಗಳನ್ನು ಮುಂದಿಟ್ಟು ವಿದಾಯ ಹೇಳಿರುವುದು ದ್ರೋಹ ಚಿಂತನೆಯಾಗಿದೆ. ಇತ್ತೀಚಿನ ಚುನಾವಣೆಗಳಲ್ಲಿನ ಹಿನ್ನಡೆಯಿಂದಾಗಿ ಕಾಂಗ್ರೆಸ್ ಕಷ್ಟದ ದಿನಗಳಲ್ಲಿದೆ. ಕೇಂದ್ರದ ಸರ್ವಾಧಿಕಾರಿ ಪ್ರಭುತ್ವದಿಂದಾಗಿ ದೇಶ ಕಷ್ಟದಲ್ಲಿದೆ. ದೇಶಾದ್ಯಂತ ದಲಿತರು, ಹಿಂದುಳಿದ ಜಾತಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿವೆ. ಈ ಸ್ಥಿತಿಯಲ್ಲಿ ಆಜಾದ್ ಯಾರ ಪರ ಇರಬೇಕಾಗಿತ್ತು? ಇಂದಿರಾಗಾಂಧಿ, ರಾಜೀವ್ ಗಾಂಧಿ, ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಸೇರಿದಂತೆ ನಾಲ್ವರು ಪ್ರಧಾನಿಗಳ ಸಂಪುಟದಲ್ಲಿ ದೀರ್ಘಕಾಲ ಸಚಿವರಾಗಿದ್ದ ಆಜಾದ್ ಅವರು ನೀತಿ-ನಿರ್ಧಾರಗಳನ್ನು ಕೈಗೊಳ್ಳುವ ಪಕ್ಷದ ವಿವಿಧ ಘಟಕಗಳಲ್ಲಿ ಪ್ರಮುಖ ಪದಾಧಿಕಾರಿಯಾಗಿದ್ದವರು. ಇನ್ನೇನು ಬೇಕಿತ್ತು ಅವರಿಗೆ..? ಒಬ್ಬ ಸಾಮಾನ್ಯ ಕಾರ್ಯಕರ್ತ ಪಕ್ಷದಿಂದ ಬಯಸುವ ಎಲ್ಲ ಹುದ್ದೆ ಮತ್ತು ಅವಕಾಶಗಳನ್ನು ಆಜಾದ್ ಅವರು ಪಡೆದಿದ್ದಾರೆ ಎಂದು ಸಿದ್ದು ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ದಿನ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಬೇಡಿ ಎನ್ನುವ ತಾಕತ್ತಿದ್ಯಾ ನಿಮಗೆ: ಪುನೀತ್ ಕೆರೆಹಳ್ಳಿ

Karnataka Weather: ಇಂದು ಈ ಜಿಲ್ಲೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಮುಂದಿನ ಸುದ್ದಿ
Show comments