Select Your Language

Notifications

webdunia
webdunia
webdunia
webdunia

ಸಿದ್ದು ವಿರುದ್ಧ ಹೆಚ್​​​ಡಿ ಕುಮಾರಸ್ವಾಮಿ ವ್ಯಂಗ್ಯ

ಸಿದ್ದು ವಿರುದ್ಧ  ಹೆಚ್​​​ಡಿ ಕುಮಾರಸ್ವಾಮಿ ವ್ಯಂಗ್ಯ
bangalore , ಸೋಮವಾರ, 8 ಆಗಸ್ಟ್ 2022 (19:45 IST)
ನಿನ್ನೆಯ ಮೈಸೂರು ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್ ಕೊಡುಗೆ ಏನು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ರು. ಇದಕ್ಕೆ ತಿರುಗೇಟು ನೀಡಿರೋ ಹೆಚ್​​​ಡಿಕೆ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದು ಸೂತ್ರಧಾರನ ಕೊಡುಗೆ ಏನು.? ಎಂದು ಪ್ರಶ್ನಿಸಿದ್ದಾರೆ. ವಿಕಿಪೀಡಿಯ ಪ್ರಕಾರ ನಿಮ್ಮ ಜನ್ಮ ವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ್ರಾ ಮಿಸ್ಟರ್ ಸಿದ್ದರಾಮಯ್ಯ..? ಎಂದು ಅಪಹಾಸ್ಯ ಮಾಡಿದ್ದಾರೆ. ನಿಮಗೂ ಕಾಂಗ್ರೆಸ್​​​​ಗೂ ಏನೂ ಸಂಬಂಧ. ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡವರು ನೀವು ಆ ಪಕ್ಷದ ಮೂಲ ನಾಯಕರನ್ನ ನುಂಗುತ್ತಿರುವ ನಿಮ್ಮ ಭಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ..? ಎಂದು ಲೇವಡಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತ್ರಿವರ್ಣ ಧ್ವಜ ಬಿಜೆಪಿಯವರೇ ವಿರೋಧ