ಗೆಹಲೋತ್ ಪ್ರಮಾಣ!

Webdunia
ಭಾನುವಾರ, 11 ಜುಲೈ 2021 (19:14 IST)
ಕರ್ನಾಟಕ ರಾಜ್ಯದ 19ನೇ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ನೇಮಕವಾಗಿದ್ದಾರೆ. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಥಾವರಚಂದ್ ಗೆಹಲೋತ್ ಇಂದು ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದ ಗಾಜಿ ಮನೆಯಲ್ಲಿ ನಡೆದ ಸರಳದ ಸಮಾರಂಭದಲ್ಲಿ ಅಧಿಕಾರ  ಸ್ವೀಕರಿಸಿದ್ದಾರೆ. ಹೈಕೋರ್ಟ್ ಸಿಜೆ ಎ.ಎಸ್.ಒಕಾ ಪ್ರತಿಜ್ಞಾವಿಧಿ ಬೋಧಿಸಿದರು. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ನೂತನ ರಾಜ್ಯಪಾಲ ಥಾವರಚಂದ್ ಗೆಹಲೋತ್, ನಾನು ಶ್ರದ್ಧಾಪೂರ್ವಕವಾಗಿ ಕರ್ನಾಟಕ ರಾಜ್ಯಪಾಲ ಹುದ್ದೆಯ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆಂದು ಭರವಸೆ ನೀಡಿದರು. ಜೊತೆಗೆ ವಿಧಿಬದ್ಧ ನಿಯಮಗಳ ಪಾಲನೆ ಮೂಲಕ ಸಂವಿಧಾನದ ರಕ್ಷಣೆ ಮಾಡಲು ಬದ್ಧನಾಗಿರುತ್ತೇನೆ. ಕರ್ನಾಟಕ ರಾಜ್ಯದ ಜನರ ಸೇವೆ ಮತ್ತು ಕಲ್ಯಾಣ ಕಾರ್ಯಗಳಲ್ಲಿ ನಿರತನಾಗಿರುತ್ತೇನೆ ಎಂದು ಹೇಳಿದರು.  ಇದಾದ ಬಳಿಕ  ನಿರ್ಗಮಿತ ರಾಜ್ಯಪಾಲ ವಿ.ಆರ್.ವಾಲಾ ಗೆಹಲೋತ್ಗೆ ಅಧಿಕಾರ ಹಸ್ತಾಂತರ ಮಾಡಿ, ನೂತನ ರಾಜ್ಯಪಾಲರಿಗೆ ಶುಭಕೋರಿದರು. ಅಲ್ಲದೆ ಸಿಎಂ ಬಿ.ಎಸ್ ವೈ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಉಳಿದೆಲ್ಲ ಸಚಿವರು, ರಾಜಕೀಯ ನಾಯಕರು ನೂತನ ರಾಜ್ಯಪಾಲರಿಗೆ ಶುಭಕೋರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎದುರೇ ಬಂದರೂ ಮುಖವೂ ನೋಡಲಿಲ್ಲ: ಸಿದ್ದರಾಮಯ್ಯಗೂ ಡಿಕೆಗೂ ಏನಾಯ್ತು Video

ಕರಾವಳಿ ಭಾಗದಲ್ಲಿ ಮಳೆಗಾಲದಲ್ಲಿ ಮಾತ್ರ ಸಿಗುವ ಕಲ್ಲು ಅಣಬೆ ಆರೋಗ್ಯ ಪ್ರಯೋಜನ ನಿಮಗೆ ತಿಳಿದಿದೆಯಾ

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಸಿಬ್ಬಂದಿಗಳು 10ರೊಳಗೆ ಆಫೀಸ್‌ಗೆ ಬರ್ಬೇಕು: ಡಿಕೆ ಶಿವಕುಮಾರ್‌ ಖಡಕ್ ಸೂಚನೆ

ನಾನು ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ: ಡಿಕೆ ಶಿವಕುಮಾರ್‌

ಜೈಪುರದಲ್ಲಿ ಶಂಕಿತ ಎಬೋಲಾ ಪ್ರಕರಣ ವರದಿ, ಮಹಿಳೆಗೆ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ

ಮುಂದಿನ ಸುದ್ದಿ
Show comments