Webdunia - Bharat's app for daily news and videos

Install App

ಅವಧಿಗೆ ಮುನ್ನ ಸಿಧು ಬಿಡುಗಡೆ ಸಾಧ್ಯತೆ

Webdunia
ಗುರುವಾರ, 29 ಡಿಸೆಂಬರ್ 2022 (16:23 IST)
ರಸ್ತೆ ರಂಪಾಟ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಕಳೆದ ಎಂಟು ತಿಂಗಳಿಂದ ಜೈಲಿನಲ್ಲಿದ್ದಾರೆ. ಅವರನ್ನು ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೊಳಿಸುವ ಸಾಧ್ಯತೆ ಇದೆ. ಗಣರಾಜ್ಯೋತ್ಸವ ದಿನ ಒಟ್ಟು 51 ಕೈದಿಗಳನ್ನು ಬಿಡುಗಡೆಗೊಳಿಸಲು ಪಂಜಾಬ್‌ನ ಆಪ್‌ ಸರ್ಕಾರ ತೀರ್ಮಾನಿಸಿದೆ. ಇದರಲ್ಲಿ ಸಿಧು ಅವರ ಹೆಸರು ಕೂಡ ಇದೆ. ಈ ನಿರ್ಧಾರ ಕುರಿತು ಶೀಘ್ರವೇ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮತಿ ಪಡೆಯಲಾಗುವುದು ಎಂದು ಸರ್ಕಾರದ  ಮೂಲಗಳು ತಿಳಿಸಿವೆ. ಸಂಪುಟ ಸಭೆಯ ಅನುಮತಿ ದೊರೆತ ನಂತರ ಬಿಡುಗಡೆಯಾಗಲಿರುವ ಕೈದಿಗಳ ಪಟ್ಟಿಯನ್ನು ರಾಜ್ಯಪಾಲರ ಸಮ್ಮತಿಗೆ ಕಳಿಸಿಕೊಡಲಾಗುತ್ತದೆ. 1988ರಲ್ಲಿ ನಡೆದ ರಸ್ತೆ ಹೊಡೆದಾಟ ಪ್ರಕರಣದಲ್ಲಿ ಸಿಧು ಶಿಕ್ಷೆಗೆ ಗುರಿಯಾಗಿದ್ದರು. ಸುಪ್ರೀಂ ಕೋರ್ಟ್‌ ಅವರಿಗೆ ಒಂದು ವರ್ಷದ ಕಾರಾಗೃಹ ಶಿಕ್ಷೆ ವಿಧಿಸಿದೆ. ಕಳೆದ ಮೇ ತಿಂಗಳ 20ರಂದು ಅವರು ಪಟಿಯಾಲ ಜೈಲು ಸೇರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments