Select Your Language

Notifications

webdunia
webdunia
webdunia
webdunia

ಪ್ರದೀಪ್ ಈಶ್ವರ್ ಮೇಲಿನ ಚಪ್ಪಲಿ ಎಸೆತ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

MLA Pradeep Eshwar
ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಭಾಷಣಕ್ಕೆ ಅಡ್ಡಿ‍ಪಡಿಸಿ, ಗದ್ದಲ ಸೃಷ್ಟಿ ಮಾಡಿದ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. 

ಈ ಕುರಿತು ಮಾಹಿತಿ ನೀಡಿರುವ ಎಸ್‌ಪಿ ಕುಶಾಲ್ ಚೌಕ್ಸಿ ಅವರು, ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.  ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಗದ್ದಲ ಮತ್ತು ಗಲಾಟೆಯಲ್ಲಿ ಸುಮಾರು 100 ರಿಂದ 150 ಕ್ಕೂ ಹೆಚ್ಚು ಮಂದಿ ಭಾಗಿಯಾಗಿರುವ ಮಾಹಿತಿ ಸಿಕ್ಕಿದೆ. ವಿಡಿಯೋ ಸಾಕ್ಷ್ಯಗಳ ಆಧಾರದ ಮೇಲೆ ಉಳಿದ ಎಲ್ಲ ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಇನ್ನೂ ಈ ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮುದಾಯ ಸೇರಿದಂತೆ ವಿವಿಧ ಜಾತಿ-ಸಮುದಾಯದ ಸಾರ್ವಜನಿಕರು ಭಾಗವಹಿಸಿದ್ದರು. ಆದರೆ, ಗದ್ದಲ ಎಬ್ಬಿಸಿದವರು ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷದ ಕಾರ್ಯಕರ್ತರೋ ಅಥವಾ ಸಾಮಾನ್ಯ ಜನರೋ ಎಂಬ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ. 

ಇದೇ ವೇಳೆ ಇಲಾಖೆಯ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ಎಸ್‌ಪಿ, ಕಾರ್ಯಕ್ರಮಕ್ಕೆ ಪೊಲೀಸ್  ಇಲಾಖೆಯಿಂದ ಸಮರ್ಪಕ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇನ್ನೂ ಇದರಲ್ಲಿ ಪೊಲೀಸರ ಯಾವುದೇ ವೈಫಲ್ಯವಿಲ್ಲ ಎಂದು ಹೇಳಿದರು.  

ಶಾಸಕ ಪ್ರದೀಪ್ ಈಶ್ವರ್ ಅವರ ಮೇಲಿನ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ನಿವಾಸದ ಎದುರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ದಾಳಿ ಮಾಡಿದವರನ್ನು ತಕ್ಷಣವೇ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಹುಕೋಟಿ ವೈದ್ಯಕೀಯ ಹಗರಣ ಪ್ರಕರಣ: ದೆಹಲಿಯ ಮಾಜಿ ಉನ್ನತ ಆರೋಗ್ಯಾಧಿಕಾರಿ ಅರೆಸ್ಟ್‌