Select Your Language

Notifications

webdunia
webdunia
webdunia
webdunia

ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Vachananda Swamiji
ದಾವಣಗೆರೆ: ಬಾಲಕನ ಮೇಲೆ‌ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾದ ಕೇಸ್ ಸಂಬಂಧ ನ್ಯಾಯಾಲಯಕ್ಕೆ ಇಂದು ಪೊಲೀಸರು ದೋಷಾರೋಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ. 

ಪ್ರಕರಣ ದಾಖಲಾದ ತಿಂಗಳಲ್ಲೇ ತನಿಖೆ ಪೂರ್ಣಗೊಂಡಿದ್ದು 100ಕ್ಕೂ ಹೆಚ್ಚು ಪುಟಗಳ ದೋಷಾರೋಪಪಟ್ಟಿ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ಜೂನ್‌ 6ರಂದು ಸಲ್ಲಿಕೆಯಾಗಿದೆ. 

ಸಾಕ್ಷ್ಯಗಳು, ಸಂತ್ರಸ್ತ ಬಾಲಕ, ಆತನ ಸಹಪಾಠಿಗಳು ಸೇರಿದಂತೆ ಹಲವರ ಹೇಳಿಕೆಯನ್ನು ದೋಷಾರೋಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ. 

ವಸತಿನಿಲಯದ ಬಾಲಕರನ್ನು ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲೂಸಿ) ಸಿದ್ಧಪಡಿಸಿದ ವರದಿ ದೋಷಾರೋಪಪಟ್ಟಿಯಲ್ಲಿದೆ. ಕೆಲ ವೈದ್ಯಕೀಯ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಳು ಮಾತ್ರ ಬಾಕಿ ಇವೆ ಎಂದು ಮೂಲಗಳು ಮಾಹಿತಿ ನೀಡಿವೆ.

16 ವರ್ಷದ ಸಂತ್ರಸ್ತ ಬಾಲಕನ ತಾಯಿಯೊಬ್ಬರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ಮೇ 5ರಂದು ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೊ ಪ್ರಕರಣ ನೀಡಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

RajyaSabha Election: ಕರ್ನಾಟಕದಿಂದ ರಾಜ್ಯಸಭೆಗೆ ಸರ್ವಾನುಮತದಿಂದ ಆಯ್ಕೆಯಾದ ಅಭ್ಯರ್ಥಿಗಳು ಇವರೇ