ಸಿಲಿಕಾನ್ ಸಿಟಿಯಲ್ಲ ಕಸದ ಸಿಟಿ

Webdunia
ಭಾನುವಾರ, 3 ಜುಲೈ 2022 (18:17 IST)
ಬೇಡಿಕೆ ಈಡೇರಿಸುವಂತೆ ನೇರ ವೇತನದಡಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಕಳೆದ ಎರಡು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವುದರಿಂದ ನಗರದ ರಸ್ತೆ, ಆಟದ ಮೈದಾನ, ಬಸ್‌ ನಿಲ್ದಾಣ ಹಾಗೂ ಮಾರುಕಟ್ಟೆ ಪ್ರದೇಶದಲ್ಲಿ ಕಸ ತುಂಬಿಕೊಳ್ಳುತ್ತಿದೆ.
ಸ್ವಚ್ಛತಾ ಕಾರ್ಯ ನಡೆಸುವ ಬಿಬಿಎಂಪಿಯ ಬಹುತೇಕ ಪೌರಕಾರ್ಮಿಕರು ಶುಕ್ರವಾರ ಹಾಗೂ ಶನಿವಾರ ರಸ್ತೆ ಗುಡಿಸುವ ಕಾರ್ಯ ನಡೆಸಿಲ್ಲ. ಹೀಗಾಗಿ, ಎಲ್ಲೆಂದರಲ್ಲಿ ಕಸ ಕಂಡು ಬಂದಿದೆ. ಆದರೆ, ಮನೆ ಮನೆಯಿಂದ ಕಸ ಸಂಗ್ರಹಣೆ ಹಾಗೂ ಮಾರುಕಟ್ಟೆ, ವ್ಯಾಪಾರಿ ಸ್ಥಳದಲ್ಲಿ ಕಸ ವಿಲೇವಾರಿಯಲ್ಲಿ ಭಾರೀ ಪ್ರಮಾಣ ವ್ಯತ್ಯಯ ಕಂಡು ಬರಲಿಲ್ಲ.
 
ಮನೆ ಮನೆಯಿಂದ ಕಸ ಸಂಗ್ರಹಿಸುವ 5,205 ಆಟೋ ಟಿಪ್ಪರ್‌ಗಳ ಚಾಲಕರ ಪೈಕಿ 4,945 ಹಾಜರಾಗಿದ್ದಾರೆ. ಆಟೋಗಳಲ್ಲಿ 5,360 ಕಸ ಸಂಗ್ರಹಣೆ ಸಹಾಯಕ ಕಾರ್ಯ ಮಾಡುತ್ತಿದ್ದು, ಅವರಲ್ಲಿ 4,713 ಹಾಜರಾಗಿದ್ದಾರೆ. ಮತ್ತೊಂದೆಡೆ 644ರಲ್ಲಿ 630 ಕಸ ಸಾಗಣೆಯ ಲಾರಿ (ಕಾಂಪ್ಯಾಕ್ಟರ್‌) ಹಾಜರಾಗಿದ್ದು, ಕಸ ಸಂಗ್ರಹಣೆ ಮತ್ತು ವಿಲೇವಾರಿ ಪೂರ್ಣಗೊಂಡಿದೆ. ನಗರದಲ್ಲಿ 18 ಸಾವಿರ ಪೌರ ಕಾರ್ಮಿಕರಲ್ಲಿ ಶೇ.70 ಕಾರ್ಮಿಕರು ಪ್ರತಿಭಟನೆಯಲ್ಲಿ ತೊಡಗಿದ್ದು, ಕಾಯಂ ಸೇವೆಯ ಕಾರ್ಮಿಕರು ಸೇರಿ 3,615 ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯ ಮಾಡಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments