ದಾಖಲೆ ಬೆಲೆ ಕಂಡ ರೇಷ್ಮೆ ಬೆಳೆ

Webdunia
ಬುಧವಾರ, 2 ಫೆಬ್ರವರಿ 2022 (19:34 IST)
ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಬುಧವಾರ ದಾಖಲೆ ಮಟ್ಟದಲ್ಲಿ ರೇಷ್ಮೆಗೂಡು ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1043 ರೂಪಾಯಿಗೆ ಮಾರಾಟವಾಗಿದೆ.
 
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಸಚಿವ ಡಾ.ನಾರಾಯಣಗೌಡ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆಗೂಡಿನ ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಉತ್ತಮ ಬೆಳವಣಿಗೆ.
ದಿನದಿಂದ ದಿನಕ್ಕೆ ರೇಷ್ಮೆಗೂಡಿನ ದರ ಏರಿಕೆಯಾಗುತ್ತಿದೆ ಎಂದಿದ್ದಾರೆ.
 
ರೇಷ್ಮೆಗೂಡಿನ ದರ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ರೇಷ್ಮೆ ಬೆಳೆಗಾರರ ಜತೆ ನಮ್ಮ ಸರ್ಕಾರ ಇದೆ. ರೇಷ್ಮೆ ಬೆಳೆಗಾರರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಹಾಗೂ ಗುಣಮಟಕ್ಕೆ ತಕ್ಕಂತೆ ಉತ್ತಮ ಬೆಲೆ ಸಿಗುವಂತೆ ನೋಡಿಕೊಳ್ಳುತ್ತೇನೆ. ರೇಷ್ಮೆಗೂಡು ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಮತ್ತಷ್ಟು ರೈತರು ರೇಷ್ಮೆ ಬೆಳೆಯುವುದಕ್ಕೆ ಪ್ರೇರಣೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
 
ರೇಷ್ಮೆ ಮಾರುಕಟ್ಟೆಗಳಲ್ಲಿ ಆಗುತ್ತಿದ್ದ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿರುವ ಪರಿಣಾಮದಿಂದ ರೇಷ್ಮೆ ಗೂಡಿನ ಗುಣಮಟ್ಟಕ್ಕೆ ತಕ್ಕಂತೆ ನೈಜ ಬೆಲೆ ಸಿಗುತ್ತಿದೆ. ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡ ಪರಿಣಾಮ ದಾಖಲೆ ದರಕ್ಕೆ ರೇಷ್ಮೆಗೂಡು ಮಾರಾಟ ಆಗುತ್ತಿದೆ ಎಂದಿದ್ದಾರೆ.
 
ರೇಷ್ಮೆ ದರ ಸರಾಸರಿ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. 2020-21ನೇ ಸಾಲಿನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ ಸರಾಸರಿ 300 ರೂಪಾಯಿ ಇತ್ತು. 2021ರ ನವೆಂಬರ್- ಡಿಸೆಂಬರ್​ನಲ್ಲಿ 700-800 ರೂಪಾಯಿ ಇತ್ತು. ಈಗ ಒಂದು ಕೆಜಿ ರೇಷ್ಮೆಗೂಡು 1043 ರೂಪಾಯಿಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments