Webdunia - Bharat's app for daily news and videos

Install App

ದಾಖಲೆ ಬೆಲೆ ಕಂಡ ರೇಷ್ಮೆ ಬೆಳೆ

Webdunia
ಬುಧವಾರ, 2 ಫೆಬ್ರವರಿ 2022 (19:34 IST)
ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಬುಧವಾರ ದಾಖಲೆ ಮಟ್ಟದಲ್ಲಿ ರೇಷ್ಮೆಗೂಡು ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1043 ರೂಪಾಯಿಗೆ ಮಾರಾಟವಾಗಿದೆ.
 
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಸಚಿವ ಡಾ.ನಾರಾಯಣಗೌಡ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆಗೂಡಿನ ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಉತ್ತಮ ಬೆಳವಣಿಗೆ.
ದಿನದಿಂದ ದಿನಕ್ಕೆ ರೇಷ್ಮೆಗೂಡಿನ ದರ ಏರಿಕೆಯಾಗುತ್ತಿದೆ ಎಂದಿದ್ದಾರೆ.
 
ರೇಷ್ಮೆಗೂಡಿನ ದರ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ರೇಷ್ಮೆ ಬೆಳೆಗಾರರ ಜತೆ ನಮ್ಮ ಸರ್ಕಾರ ಇದೆ. ರೇಷ್ಮೆ ಬೆಳೆಗಾರರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಹಾಗೂ ಗುಣಮಟಕ್ಕೆ ತಕ್ಕಂತೆ ಉತ್ತಮ ಬೆಲೆ ಸಿಗುವಂತೆ ನೋಡಿಕೊಳ್ಳುತ್ತೇನೆ. ರೇಷ್ಮೆಗೂಡು ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಮತ್ತಷ್ಟು ರೈತರು ರೇಷ್ಮೆ ಬೆಳೆಯುವುದಕ್ಕೆ ಪ್ರೇರಣೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
 
ರೇಷ್ಮೆ ಮಾರುಕಟ್ಟೆಗಳಲ್ಲಿ ಆಗುತ್ತಿದ್ದ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿರುವ ಪರಿಣಾಮದಿಂದ ರೇಷ್ಮೆ ಗೂಡಿನ ಗುಣಮಟ್ಟಕ್ಕೆ ತಕ್ಕಂತೆ ನೈಜ ಬೆಲೆ ಸಿಗುತ್ತಿದೆ. ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡ ಪರಿಣಾಮ ದಾಖಲೆ ದರಕ್ಕೆ ರೇಷ್ಮೆಗೂಡು ಮಾರಾಟ ಆಗುತ್ತಿದೆ ಎಂದಿದ್ದಾರೆ.
 
ರೇಷ್ಮೆ ದರ ಸರಾಸರಿ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. 2020-21ನೇ ಸಾಲಿನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ ಸರಾಸರಿ 300 ರೂಪಾಯಿ ಇತ್ತು. 2021ರ ನವೆಂಬರ್- ಡಿಸೆಂಬರ್​ನಲ್ಲಿ 700-800 ರೂಪಾಯಿ ಇತ್ತು. ಈಗ ಒಂದು ಕೆಜಿ ರೇಷ್ಮೆಗೂಡು 1043 ರೂಪಾಯಿಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡುವ ಬಗ್ಗೆ ಕುಟುಂಬಕ್ಕೆ ಮಾಹಿತಿ ಇತ್ತಾ: ಅನಿರುದ್ಧ ಹೇಳಿದ್ದೇನು

ಮುಂದಿನ ಸುದ್ದಿ
Show comments