ಏಕಕಾಲಕ್ಕೆ "ಜಯ ಭಾರತ ಜನನಿಯ ತನುಜಾತೆ" ಲಕ್ಷಕಂಠಗಳಲ್ಲಿ ಕನ್ನಡ ಗೀತಗಾಯನ

Webdunia
ಗುರುವಾರ, 28 ಅಕ್ಟೋಬರ್ 2021 (21:06 IST)
ಇಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಕೇಂದ್ರ ಕಚೇರಿ,ಕೇಂದ್ರ ಕಾರ್ಯಾಗಾರ, ಎಲ್ಲ ಘಟಕಗಳಲ್ಲಿ  ಏಕಕಾಲಕ್ಕೆ  "ಜಯ ಭಾರತ ಜನನಿಯ ತನುಜಾತೆ"
ಲಕ್ಷಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮವನ್ನು ಬೆಳಗ್ಗೆ : 11:00 ಗಂಟೆಗೆ ಹಮ್ಮಿಕೊಳ್ಳಲಾಯಿತು.
 
ಮೊದಲಿಗೆ ನಾಡಗೀತೆ ಆ ನಂತರ  ರಾಷ್ಟ್ರಕವಿ ಕುವೆಂಪು ಅವರ 'ಬಾರಿಸು ಕನ್ನಡ ಡಿಂಡಿಮವ’, ನಿಸಾರ್ ಅಹಮ್ಮದ್​ರವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಡಾ. ಹಂಸಲೇಖ ಅವರ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’  ಏಕಕಾಲದಲ್ಲಿ ಎಲ್ಲ ಸ್ಥಳಗಳಲ್ಲಿ ಮೊಳಗಿದವು.
 
 ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ. ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಬದ್ಧನಾಗಿರುತ್ತೇನೆ ಎಂದು ಸಂಕಲ್ಪ ಮಾಡಲಾಯಿತು.
 
ಈ ಸಂದರ್ಭದಲ್ಲಿ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ. ಅನ್ಬುಕುಮಾರ್ ರವರು ಮಾತನಾಡಿ ಕನ್ನಡವನ್ನು ಬಳಸಲು ಮತ್ತು ಕನ್ನಡದಲ್ಲಿ ವ್ಯವಹರಿಸಲು ಪ್ರೋತ್ಸಾಹಿಸುವ ಸಲುವಾಗಿ ಅಧಿಕಾರಿಗಳು&ಸಿಬ್ಬಂದಿಗಳಿಗೆ ರೂ.5000 ಬಹುಮಾನ ನೀಡಲು ರೂ.50,000/- ಗಳನ್ನು ಮೀಸಲಿಡುವುದಾಗಿ ತಿಳಿಸಿರುತ್ತಾರೆ.
kannada

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಆಹಾರ ಅರಸಿ ಬಂದು ನೀರಿದ್ದ ಬಾವಿಗೆ ಬಿದ್ದ ನಾಲ್ಕು ಆನೆಗಳು, ತನ್ನ ಮಗು ರಕ್ಷಣೆಗೆ ತಾಯಿ ಆನೆ ಪರದಾಟ

ನಿಜಜೀವನದಲ್ಲೂ ನಾಯಕನಂತೆ ಬದುಕಬೇಕು, ಪರೋಕ್ಷವಾಗಿ ದರ್ಶನ್‌ಗೆ ಬುದ್ದಿಮಾತು ಹೇಳಿದ್ರಾ ಸಿಎಂ

ಮುಂದಿನ ಸುದ್ದಿ
Show comments