Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಸೋಲಿಸಲು ಕುತಂತ್ರ

Webdunia
ಬುಧವಾರ, 3 ನವೆಂಬರ್ 2021 (22:09 IST)
ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಸೋಲಿಸಲು ಕುತಂತ್ರ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ನಿಜ ಸ್ವರೂಪವನ್ನು ಬಯಲು ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಫಾರೂಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರು ವಕ್ಫ್ ಆಸ್ತಿ ಕಬಳಿಸುವುದು, ಐಎಂಎ ಹಗರಣ, ಅಮಾನತ್ ಬ್ಯಾಂಕ್ ದಿವಾಳಿ ಮುಂತಾದ ಪ್ರಕರಣಗಳಿಂದ ಮುಸ್ಲಿಮರ ಮಧ್ಯೆ ಕುಖ್ಯಾತಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಮುಸ್ಲಿಮರ ಹೊಸ ಪೀಳಿಗೆಯ ಪ್ರಾಮಾಣಿಕ  ನಾಯಕರನ್ನು ಬೆಳೆಸಲು ಯತ್ನಿಸಿದೆ. ಹಾಗೆಂದೇ ಸಿಂದಗಿ ಮತ್ತು ಹಾನಗಲ್ ನಲ್ಲಿ ಹೊಸ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಜಮೀರ್ ಖಾನ್ , ಸಿದ್ದರಾಮಯ್ಯ ಮುಂತಾದವರಿಗೆ ಇದನ್ನು ಸಹಿಸಲು ಸಾಧ್ಯವಾಗಿಲ್ಲ. ಬಿಜೆಪಿ ಜೊತೆಗೆ ರಹಸ್ಯ ಒಪ್ಪಂದ ಮಾಡಿಕೊಂಡು ಅವರು ಮುಸ್ಲಿಂ ಅಭ್ಯರ್ಥಿಗಳನ್ನು ಸೋಲಿಸಿದ್ದಾರೆ ಎಂದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಪಕ್ಷದ ನೀತಿಯಂತೆ ಮುಂದಿನ ಚುನಾವಣೆಗಳಲ್ಲೂ ಹೊಸ ಮುಸ್ಲಿಂ ಯುವ ನಾಯಕತ್ವ ಬೆಳೆಸಲು ನಿರ್ಧರಿಸಿದ್ದಾರೆ. ಸೋಲು- ಗೆಲುವು ಚುನಾವಣೆಯಲ್ಲಿ ಸಹಜ. ಸಿಂದಗಿಯಲ್ಲಿ ಜೆಡಿಎಸ್ ಪಕ್ಷದ ನಾಯಕರನ್ನು ಪಕ್ಷಾಂತರ ಮಾಡಿಸಿ ತಮ್ಮ ಅಭ್ಯರ್ಥಿಯನ್ನಾಗಿ ಮಾಡಿದ ಕಾಂಗ್ರೆಸ್ ನಾಯಕರಿಗೆ ಅಲ್ಲಿನ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments