Webdunia - Bharat's app for daily news and videos

Install App

ಮಹಡಿಯಿಂದ ಎಸೆದು ಮಗಳನ್ನು ಕೊಲೆಗೈದ ಪಾಪಿ ತಾಯಿ!?

Webdunia
ಶುಕ್ರವಾರ, 5 ಆಗಸ್ಟ್ 2022 (12:44 IST)
ಬೆಂಗಳೂರು :  ಪಾಪಿ ತಾಯಿಯೊಬ್ಬಳು ತನ್ನ 4 ವರ್ಷದ ಪುತ್ರಿಯನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಸಂಪಂಗಿ ರಾಮನಗರದ ಅದ್ವೈತ್ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಜೀತಿ ಎಂದು ಗುರುತಿಸಲಾಗಿದೆ.

ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ತಾಯಿಯ ಈ ಅಮಾನವೀಯ ಕೃತ್ಯಕ್ಕೆ ಜನ ಕೆಂಡಾಮಂಡಲರಾಗಿದ್ದಾರೆ.

ಆರೋಪಿ ತಾಯಿ ಸುಷ್ಮಾ ಇತ್ತೀಚೆಗಷ್ಟೇ ಗಂಡನನ್ನು ಕಳೆದುಕೊಂಡಿದ್ದಳು. ಅನಾರೋಗ್ಯದಿಂದ ಪತಿ ತೀರಿಕೊಂಡಿದ್ದರು. ಇತ್ತ ಮಗಳು ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾಳೆ ಎಂದು ಸುಷ್ಮಾ ಈ ಕೃತ್ಯ ಎಸಗಿದ್ದಾಳೆ. ಮೇಲಿಂದ ಬಿದ್ದ ರಭಸಕ್ಕೆ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ.

ಮಗುವನ್ನು ಮೇಲಿಂದ ಬಿಸಾಕಿದ ಬಳಿಕ ಸುಷ್ಮಾ ತಾನೂ ಆತ್ಮಹತ್ಯೆ ಮಡಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಅಕ್ಕಪಕ್ಕದ ಮನೆಯವರು ಬಂದು ಆಕೆಯನು ರಕ್ಷಣೆ ಮಾಡಿರುವುದನ್ನು ಸಿಸಿಟಿವಿ ದೃಶ್ಯದಲ್ಲಿ ಕಾಣಬಹುದಾಗಿದೆ. 

ಸುಷ್ಮಾ ಕಳೆದ ಮೂರು ತಿಂಗಳ ಹಿಂದೆಯೇ ರೈಲ್ವೆ ಸ್ಟೇಷನ್ ನಲ್ಲಿ ಮಗುವನ್ನು ಬಿಟ್ಟು ಬಂದಿದ್ದಳು. ಈ ವೇಳೆ ಪತಿ ಮಗುವನ್ನು ಹುಡುಕಿ ಕರೆದುಕೊಂಡು ಬಂದಿದ್ದರು. ಇದೀಗ ಮತ್ತೆ ಮಗುವನ್ನು ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಸ್ಥಳೀಯರ ಸಮಯ ಪ್ರಜ್ಞೆಯಿಂದ ಆಕೆ ಬಚಾವ್ ಆಗಿದ್ದಾಳೆ.

ದಂತ ವೈದ್ಯೆಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಸುಷ್ಮಾ ಪತಿ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಸದ್ಯ ಪ್ರಕರಣ ಸಂಬಂಧ ತಾಯಿ ಸುಷ್ಮಾ ವಿರುದ್ದ ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments