ಒಂಟಿ ಮನೆ ಯೋಜನೆ ಪುನರ್ ಪ್ರಾರಂಭ ಕುರಿತು ಶೀಘ್ರ ಆದೇಶ: ಸಿಎಂ ಬೊಮ್ಮಾಯಿ

Webdunia
ಬುಧವಾರ, 15 ಜೂನ್ 2022 (17:01 IST)
ಬಡವರಿಗೆ ಹಾಗೂ ಹಿಂದುಳಿದವರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ಒದಗಿಸುವ  ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಹಿಂದೆ ಅನುಷ್ಠಾನ ಮಾಡಿದ್ದ ಒಂಟಿ ಮನೆ ಯೋಜನೆಯನ್ನು ಪುನರ್  ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಕುರಿತ ಆದೇಶ ಶೀಘ್ರವಾಗಿ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ ಚಿಕ್ಕಪೇಟೆ ವಿಧಾನ ಸಭಾ ಕ್ಷೇತ್ರದ-100 ಯೋಜನೆ ಕಾಮಗಾರಿಯ ವೀಕ್ಷಣೆ, ನವೀಕರಣಗೊಂಡಿರುವ ಬೈರಸಂದ್ರ  ಕೆರೆ ಹಾಗೂ ಧರ್ಮರಾಯಸ್ವಾಮಿ ದೇವಸ್ಥಾನ ವಾರ್ಡ್ ವ್ಯಾಪ್ತಿಯಲ್ಲಿ  ನಿರ್ಮಿಸಲಾಗಿರುವ ಎಂ.ಎಸ್. ಬಹುಮಹಡಿ ವಸತಿ ಕಟ್ಟಡದ ಉದ್ಘಾಟನೆ ಹಾಗೂ ಗಾಂಧಿ ಬಜಾರಿನಲ್ಲಿ ಬಹುಮಹಡಿ ವಾಹನ ನಿಲದಾಣ  ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. 
ಕೋವಿಡ್ ಸಾಂಕ್ರಾಮಿಕದಿಂದಾಗಿ ನಿಂತು ಹೋಗಿದ್ದ ಯೋಜನೆಯನ್ನು ಪ್ರಾರಂಭಿಸುವುದರಿಂದ  ಸ್ಥಳವಿದ್ದವರು ಒಂಟಿ  ಮನೆ ನಿರ್ಮಾಣ ಮಾಡಿಕೊಳ್ಳಲು ಸಹಾಯವಾಗಲಿದೆ. ಪ್ರತಿ ವಾರ್ಡಿಗೆ ಮನೆಗಳ ಸಂಖ್ಯೆಯನ್ನು ನಿಗದಿ ಮಾಡಲಾಗುವುದು ಎಂದರು. ಬೆಂಗಳೂರಿನ ಮೂಲಭೂತ ಸೌಕರ್ಯ ಹಾಗೂ ನಾಗರಿಕರಿಗೆ  ಕಾನೂನಿನ ತೊಡಕುಗಳನ್ನು ಸರಿಪಡಿಸಿ ಬೆಂಗಳೂರಿನ ಅಂತರರಾಷ್ಟ್ರೀಯ ಮಟ್ಟದ ಖ್ಯಾತಿಗೆ ಗರಿ ಮೂಡಿಸಲು ಇನ್ನಷ್ಟು  ಕಾರ್ಯಕ್ರಮಗಳನ್ನು ಜೋಡಿಸಲಾಗುತ್ತಿದೆ. ನಗರಕ್ಕೆ ತನ್ನದೇ ಆರೋಗ್ಯ ವ್ಯವಸ್ಥೆಯನ್ನು ರೂಪಿಸಲಾಗಿದೆ. ಏಕಸಾಮ್ಯ ಆಡಳಿತ ತರುವ ಕೆಲಸ, 20 ಶಾಲೆಗಳನ್ನು ಆಧುನಿಕರಣ ಮಾಡಲಾಗುತ್ತಿದೆ. ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯ, ಸೌಂದರ್ಯೀಕರಣವನ್ನು ಬೆಂಗಳೂರಿನ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೂಪಿಸಲಾಗಿದೆ ಎಂದು ಉಖ್ಯಮಂತ್ರಿಗಳು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸಿಎಂ‌ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಕೈ‌ ನಾಯಕಿ, ಹೇಳಿದ್ದೇನೂ

ಬ್ರಾಹ್ಮಣರ‌ ವಿರುದ್ದ ಅವಹೇಳನಕಾರಿ‌ ಹೇಳಿಕೆ, ಸಿಗಂದೂರು ಧರ್ಮದರ್ಶಿಗೆ ಕಂಟಕವಾಗುತ್ತಾ ಹೇಳಿಕೆ

ಎನ್‌ಡಿಎಗೆ ಜೆಡಿಎಸ್‌ ಕೊಡುವ ಶಕ್ತಿಯನ್ನು ಮೋದಿ ಗುರತಿಸ್ತಾರೆ: ದೇವೇಗೌಡ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ಮುಂದಿನ ಸುದ್ದಿ
Show comments