Select Your Language

Notifications

webdunia
webdunia
webdunia
webdunia

ಪೊಲೀಸರ ಬೇಡಿಕೆ ಈಡೇರಿಸುವವರೆಗೂ ಮರ ಇಳಿಯಲ್ಲ: ಸಿಂಗ್ಲಿ ಬಸ್ಯಾ

ಪೊಲೀಸ
ಬೆಂಗಳೂರು , ಸೋಮವಾರ, 30 ಮೇ 2016 (11:14 IST)
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜೂನ್ 4 ರಂದು, ರಾಜ್ಯಾದ್ಯಂತ ಪೊಲೀಸರು ಕೈಗೊಂಡಿರುವ ಸಾಮೂಹಿಕ ಪ್ರತಿಭಟನೆಗೆ ಸಿಂಗ್ಲಿ ಬಸ್ಯಾ ಬೆಂಬಲ ವ್ಯಕ್ತಪಡಿಸಿದ್ದಾರೆ.
 
ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಜೂನ್ 4 ರಂದು ರಾಜ್ಯಾದ್ಯಂತ ಪೊಲೀಸರು ಕೈಗೊಂಡಿರುವ ಸಾಮೂಹಿಕ ಪ್ರತಿಭಟನೆಗೆ ಮರವೇರಿ ಪ್ರತಿಭಟನೆ ನಡೆಸುವುದರಲ್ಲಿ ಫೇಮಸ್ ಆಗಿರುವ ಕರ್ನಾಟಕದ ಸಿಂಗ್ಲಿ ಬಸ್ಯಾ ಸಾಥ ನೀಡಿದ್ದಾರೆ.
 
ರಾಜ್ಯದಲ್ಲಿ ಪೊಲೀಸರಿಗೆ ನೀಡುವ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಹೀಗಾಗಿ, ಪೊಲೀಸರು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದಾರೆ. ರಾಜ್ಯ ಸರಕಾರ ಪೊಲೀಸರ ವೇತನದಲ್ಲಿ ಮಾಡುತ್ತಿರುವ ತಾರತಮ್ಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಆಗ್ರಹಿಸಿ ಹಾವೇರಿ ಜಿಲ್ಲೆಯ ಸಿಗ್ಗಾವಿ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಸಿಂಗ್ಲಿ ಬಸ್ಯಾ ಮರವೇರಿ ಪ್ರತಿಭಟನೆ ನಡೆಸುತ್ತಿದ್ದಾನೆ.
 
ಮರವೇರಿ ಪ್ರತಿಭಟನೆ ನಡೆಸುತ್ತಿರುವ ಸಿಂಗ್ಲಿ ಬಸ್ಯಾ ಅವರನ್ನು ಮರದಿಂದ ಕೆಳಗಿಳಿಸಲು ಪೊಲೀಸರು ಮತ್ತು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದು, ಪೊಲೀಸರಿಗೆ ನ್ಯಾಯ ಸಿಗುವವರೆಗೂ ಮರದಿಂದ ಕೆಳಗಿಳಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ.
 
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಶಾಸಕರ ಹಾಜರಿಗೆ ಮಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ