ಬಿಂಗಿ ಹಬ್ಬ ಮುಗಿಸಿ ಸಾವನ್ನಪ್ಪಿದ್ದು ಹೇಗೆ?

Webdunia
ಸೋಮವಾರ, 2 ಜುಲೈ 2018 (20:43 IST)
ಅಲ್ಲಿ ಎಲ್ಲರೂ ಹಬ್ಬದ ಸಂಭ್ರಮದಲ್ಲಿದ್ದರು. ಆದರೆ ಹಬ್ಬದ ಆಚರಣೆ ಬಳಿಕ ಸ್ನಾನಕ್ಕೆಂದು ಆರು ಜನರು ಕೆರೆಗೆ ಧುಮುಕಿದ್ದರು. ಆದರೆ ವಿಧಿ ಆಟ ಬೇರೆಯೇ ಆಗಿತ್ತು. ಸ್ನಾನ ಮಾಡುವುದಕ್ಕೆ ಅಂತ ಧುಮುಕಿದವರಲ್ಲೊಬ್ಬ ಸಾವನ್ನಪ್ಪಿದ್ದಾನೆ. 
 
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿ ಎಂಬಲ್ಲಿ ಈ ಘಟನೆ ನಡೆದಿದೆ. ಅರಿಶಿನಗೋಡ ಮೂಲದ ಬೇಡ್ಕಣಿಯಲ್ಲಿ ವಾಸವಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತನ ಹೆಸರು ದಾಸ (30) ಎಂದು ಗುರುತಿಸಲಾಗಿದೆ. ಆದರೆ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಬೇಡ್ಕಣಿಯ ಶನೇಶ್ವರ ದೇವಾಲಯದಲ್ಲಿ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿಂಗಿ ಹಬ್ಬ ಮುಗಿಸಿ ಸ್ನಾನಕ್ಕೆಂದು ಆರೆಂಟು ಜನರು ಕೆರೆಗೆ ಧುಮುಕಿದ್ದರು. ಆದರೆ ಅವರಲ್ಲಿ ದಾಸ ಸಾವನ್ನಪ್ಪಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರು ಶವ ಹುಡುಕಾಟದಲ್ಲಿ ತೊಡಗಿದ್ದಾರೆ.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments