Webdunia - Bharat's app for daily news and videos

Install App

ಬಿಂಗಿ ಹಬ್ಬ ಮುಗಿಸಿ ಸಾವನ್ನಪ್ಪಿದ್ದು ಹೇಗೆ?

Webdunia
ಸೋಮವಾರ, 2 ಜುಲೈ 2018 (20:43 IST)
ಅಲ್ಲಿ ಎಲ್ಲರೂ ಹಬ್ಬದ ಸಂಭ್ರಮದಲ್ಲಿದ್ದರು. ಆದರೆ ಹಬ್ಬದ ಆಚರಣೆ ಬಳಿಕ ಸ್ನಾನಕ್ಕೆಂದು ಆರು ಜನರು ಕೆರೆಗೆ ಧುಮುಕಿದ್ದರು. ಆದರೆ ವಿಧಿ ಆಟ ಬೇರೆಯೇ ಆಗಿತ್ತು. ಸ್ನಾನ ಮಾಡುವುದಕ್ಕೆ ಅಂತ ಧುಮುಕಿದವರಲ್ಲೊಬ್ಬ ಸಾವನ್ನಪ್ಪಿದ್ದಾನೆ. 
 
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿ ಎಂಬಲ್ಲಿ ಈ ಘಟನೆ ನಡೆದಿದೆ. ಅರಿಶಿನಗೋಡ ಮೂಲದ ಬೇಡ್ಕಣಿಯಲ್ಲಿ ವಾಸವಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತನ ಹೆಸರು ದಾಸ (30) ಎಂದು ಗುರುತಿಸಲಾಗಿದೆ. ಆದರೆ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಬೇಡ್ಕಣಿಯ ಶನೇಶ್ವರ ದೇವಾಲಯದಲ್ಲಿ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿಂಗಿ ಹಬ್ಬ ಮುಗಿಸಿ ಸ್ನಾನಕ್ಕೆಂದು ಆರೆಂಟು ಜನರು ಕೆರೆಗೆ ಧುಮುಕಿದ್ದರು. ಆದರೆ ಅವರಲ್ಲಿ ದಾಸ ಸಾವನ್ನಪ್ಪಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರು ಶವ ಹುಡುಕಾಟದಲ್ಲಿ ತೊಡಗಿದ್ದಾರೆ.
 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments