Publish Date: Sun, 28 Jun 2026 (16:44 IST)
Updated Date: Sun, 28 Jun 2026 (16:48 IST)
ಮೈಸೂರು: ಕಾಂಗ್ರೆಸ್ ಕಾರ್ಯಕರ್ತರು ಎಸ್ಐಆರ್ ಪ್ರಕ್ರಿಯೆಯನ್ನು ಎರಡನೇ ಸ್ವಾತಂತ್ರ್ಯ ಹೋರಾಟ ಎಂದು ಭಾವಿಸಿ ಯಾರೊಬ್ಬ ಮತದಾರರ ಹೆಸರನ್ನು ಕೈಬಿಡದಂತೆ ನೋಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಹೇಳಿದರು.
ಇಲ್ಲಿನ ಜೆ.ಕೆ.ಮೈದಾನದಲ್ಲಿ ಭಾನುವಾರ ಕಾಂಗ್ರೆಸ್ ಆಯೋಜಿಸಿದ್ದ ಮೈಸೂರು ವಿಭಾಗೀಯ ಮಟ್ಟದ ಎಸ್ ಐಆರ್ ಜಾಗೃತಿ ಸಮಾವೇಶದಲ್ಲಿ ಪ್ರತಿಕ್ರಿಯಿಸಿದ ಅವರು, ಮತದಾನದ ಹಕ್ಕೇ ನಮಗೆ ಎ.ಕೆ. 47. ಈ ಅಸ್ತ್ರವನ್ನು ಉಳಿಸಿಕೊಳ್ಳಲು ನಾವೆಲ್ಲ ಹೋರಾಟ ಮಾಡಬೇಕು. ಇಲ್ಲವಾದರೆ ದೇಶ ಮತ್ತೆ ಗುಲಾಮಗಿರಿಗೆ ಹೋಗುತ್ತದೆ ಎಂದು ಹೇಳಿದರು.
ಬಿಜೆಪಿ ಹಾಗೂ ಆರ್ ಎಸ್ ಎಸ್ ಪ್ರೇರಿತ ಎಸ್ ಐಆರ್ ಇದಾಗಿದೆ. ಪರಿಷ್ಕರಣೆಗೆ ನಮ್ಮ ವಿರೋಧ ಇಲ್ಲ. ಸತ್ತವರು, ಎರಡೆರಡು ಕಡೆ ಇರುವವರ ಹೆಸರು ಕೈಬಿಡಿ. ಆದರೆ ಅರ್ಹರನ್ನು ಜಾತಿ ಆಧಾರದಲ್ಲಿ ಕೈಬಿಡಲು ಅವಕಾಶ ನೀಡುವುದಿಲ್ಲ. ಇದು ಪ್ರಜಾಪ್ರಭುತ್ವಕ್ಕೆ ಆಘಾತಕಾರಿ ವಿಷಯ ಎಂದು ಹೇಳಿದರು.
ಬಿಜೆಪಿ ಕೇವಲ ಧರ್ಮಾಧಾರಿತ, ಶ್ರೇಣಿಕೃತ ರಾಜಕಾರಣದಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಅವರಿಗೆ ಸಂವಿಧಾನ, ತ್ರಿವರ್ಣ ಧ್ವಜ, ಜಾತ್ಯತೀತತೆ ಮೇಲೆ ನಂಬಿಕೆ ಇಲ್ಲ. ನಾವೆಲ್ಲರೂ ಜೊತೆಗೂಡಿ ಸಂವಿಧಾನ ಉಳಿಸಬೇಕಿದೆ' ಎಂದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ