Publish Date: Sun, 20 Feb 2022 (07:07 IST)
Updated Date: Sun, 20 Feb 2022 (09:10 IST)
ತುಮಕೂರು : ಮನೆ ಮುಂದಿನ ನೀರಿನ ಸಂಪ್ ಗೆ ಬಿದ್ದು ಮಹಿಳೆಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಅನೈತಿಕ ಸಂಬಂಧಕ್ಕಾಗಿ ಅಣ್ಣ-ತಂಗಿ. ಕಳೆದ ಜನವರಿ 30 ರಂದು ಕೊರಟಗೆರೆ ಪಟ್ಟಣದ ಸಜ್ಜನರಾವ್ ಬೀದಿಯ ಸಾವಿತ್ರಮ್ಮ(45) ಸಂಪಿಗೆ ಬಿದ್ದು ಸಾವನ್ನಪ್ಪಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕೊರಟಗೆರೆ ಪೊಲೀಸರು ಪ್ರೀತಿಗೆ ಅಡ್ಡ ಬಂದರೆಂದು ಉಸಿರುಗಟ್ಟಿಸಿ ಸಾವಿತ್ರಮ್ಮ ಅವರನ್ನು ಕೊಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಶೈಲಜಾ ಹಾಗೂ ಪುನೀತ್ ಇಬ್ಬರು ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳು. ವರಸೆಯಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದಾನೆ. ಹೊರಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು.
ಆದರೆ ಮನೆಯೊಳಗೆ.. ಇಬ್ಬರೂ ಅನೈತಿಕ ಸಂಬಂಧದಲ್ಲಿ ತೊಡಗ್ತಿದ್ದರು. ಇಬ್ಬರ ಲವ್ವಿ ಡವ್ವಿಗೆ ಬ್ರೇಕ್ ಹಾಕಿ ಪುನೀತ್ ಹಾಗೂ ಶೈಲಜಾಗೆ ಸಾವಿತ್ರಮ್ಮ ಹಾಗೂ ಪುನೀತ್ ತಾಯಿ ಬುದ್ಧಿ ಹೇಳಿದ್ದರು.