Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ: ರಾಜರಾಜೇಶ್ವರಿನಗರದಲ್ಲಿ ತೀವ್ರ ಶೋಧ

Webdunia
ಬುಧವಾರ, 20 ಸೆಪ್ಟಂಬರ್ 2017 (11:38 IST)
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನ ಎಸ್ಐಟಿ ಮತ್ತಷ್ಟು ತೀವ್ರಗೊಳಿಸಿದೆ. ಗೌರಿ ಹತ್ಯೆಯ ಆಸುಪಾಸಿನಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಾಡಿಗೆ ಪಡೆದವರು ಮತ್ತು ಲಾಡ್ಜ್`ಗಳಲ್ಲಿ ತಂಗಿದವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.

ದಿನಪತ್ರಿಕೆಗಳ ಮೂಲಕ ಕರ ಪತ್ರಗಳನ್ನ ರಾಜರಾಜೇಶ್ವರಿ ನಗರದ ನಿವಾಸಿಗಳಿಗೆ ಹಂಚಿರುವ ಎಸ್`ಐಟಿ ತಂಡ, ಬಾಡಿಗೆ ಪಡೆದವರು, ಲಾಡ್ಜ್`ಗಳಲ್ಲಿ ತಂಗಿದವರ ಬಗ್ಗೆ ವಿವರ ಕೇಳಿದ್ದಾರೆ. 20 ಸಾವಿರಕ್ಕೂ ಅಧಿಕ ಕರ ಪತ್ರಗಳನ್ನ ಹಂಚಿಕೆ ಮಾಡಲಾಗಿದ್ದು, ಕರ ಪತ್ರಗಳಲ್ಲೇ ಇಮೇಲ್, ದೂರಾವಾಣಿ ಸಂಖ್ಯೆ ಮುದ್ರಿಸಲಾಗಿದೆ. ಗೌರಿ ಹತ್ಯೆ ಬಳಿಕ ಯಾರಾದರೂ ಮನೆಗಳನ್ನ ಖಾಲಿ ಮಾಡಿದ್ದಾರಾ..? ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕೇಳಲಾಗಿದೆ.  

ಶತಾಯಗತಾಯ ಹಂತಕರ ಬೇಟೆಗೆ ಮುಂದಾಗಿರುವ ಎಸ್ಐಟಿ ತಂಡ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ. ಗೌರಿಗೂ ಹತ್ಯೆಗೂ ಮುನ್ನ ಕೆಲ ದಿನಗಳ ಹಿಂದೆಯೇ ಬಂದಿರುವ ಹಂತಕರು ಯಾವುದಾದರೂ ಮನೆ, ಲಾಡ್ಜ್, ದೇವಸ್ಥಾನದ ವಸತಿಗೃಹಗಳು ಮತ್ತೆಲ್ಲಾದರೂ ವಾಸ್ತವ್ಯ ಹೂಡಿದ್ದರಾ ಎಂಬುದು ಪೊಲೀಸರ ಶಂಕೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments