Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ: ರಾಜರಾಜೇಶ್ವರಿನಗರದಲ್ಲಿ ತೀವ್ರ ಶೋಧ

Webdunia
ಬುಧವಾರ, 20 ಸೆಪ್ಟಂಬರ್ 2017 (11:38 IST)
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನ ಎಸ್ಐಟಿ ಮತ್ತಷ್ಟು ತೀವ್ರಗೊಳಿಸಿದೆ. ಗೌರಿ ಹತ್ಯೆಯ ಆಸುಪಾಸಿನಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಾಡಿಗೆ ಪಡೆದವರು ಮತ್ತು ಲಾಡ್ಜ್`ಗಳಲ್ಲಿ ತಂಗಿದವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.

ದಿನಪತ್ರಿಕೆಗಳ ಮೂಲಕ ಕರ ಪತ್ರಗಳನ್ನ ರಾಜರಾಜೇಶ್ವರಿ ನಗರದ ನಿವಾಸಿಗಳಿಗೆ ಹಂಚಿರುವ ಎಸ್`ಐಟಿ ತಂಡ, ಬಾಡಿಗೆ ಪಡೆದವರು, ಲಾಡ್ಜ್`ಗಳಲ್ಲಿ ತಂಗಿದವರ ಬಗ್ಗೆ ವಿವರ ಕೇಳಿದ್ದಾರೆ. 20 ಸಾವಿರಕ್ಕೂ ಅಧಿಕ ಕರ ಪತ್ರಗಳನ್ನ ಹಂಚಿಕೆ ಮಾಡಲಾಗಿದ್ದು, ಕರ ಪತ್ರಗಳಲ್ಲೇ ಇಮೇಲ್, ದೂರಾವಾಣಿ ಸಂಖ್ಯೆ ಮುದ್ರಿಸಲಾಗಿದೆ. ಗೌರಿ ಹತ್ಯೆ ಬಳಿಕ ಯಾರಾದರೂ ಮನೆಗಳನ್ನ ಖಾಲಿ ಮಾಡಿದ್ದಾರಾ..? ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕೇಳಲಾಗಿದೆ.  

ಶತಾಯಗತಾಯ ಹಂತಕರ ಬೇಟೆಗೆ ಮುಂದಾಗಿರುವ ಎಸ್ಐಟಿ ತಂಡ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ. ಗೌರಿಗೂ ಹತ್ಯೆಗೂ ಮುನ್ನ ಕೆಲ ದಿನಗಳ ಹಿಂದೆಯೇ ಬಂದಿರುವ ಹಂತಕರು ಯಾವುದಾದರೂ ಮನೆ, ಲಾಡ್ಜ್, ದೇವಸ್ಥಾನದ ವಸತಿಗೃಹಗಳು ಮತ್ತೆಲ್ಲಾದರೂ ವಾಸ್ತವ್ಯ ಹೂಡಿದ್ದರಾ ಎಂಬುದು ಪೊಲೀಸರ ಶಂಕೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments