ಧರ್ಮಸ್ಥಳ ಕೇಸ್ ನಲ್ಲಿ ಮಹತ್ವದ ಹೆಜ್ಜೆಯಿಟ್ಟ ಎಸ್ಐಟಿ

Krishnaveni K
ಶುಕ್ರವಾರ, 25 ಜುಲೈ 2025 (14:18 IST)
ಧರ್ಮಸ್ಥಳ: ಇಲ್ಲಿ ಹಲವು ವರ್ಷಗಳಿಂದ ನೂರಾರು ಶವ ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ತಂಡ ಈಗ ತನಿಖೆ ಆರಂಭಿಸಿದ್ದು ಮಹತ್ವದ ಹೆಜ್ಜೆಯಿಟ್ಟಿದೆ.

ಐಪಿಎಸ್ ಪ್ರಣಬ್ ಮೊಹಂತಿ ನೇತೃತ್ವದ ಎಸ್ಐಟಿ ತಂಡ ಧರ್ಮಸ್ಥಳಕ್ಕೆ ಬಂದು ತನಿಖೆ ಆರಂಭಿಸಿದೆ. ಹಲವಾರು ಕೊಲೆ ಪ್ರಕರಣಗಳು ನಡೆದಿವೆ ಎಂಬ ಆರೋಪದ ಹಿನ್ನಲೆಯಲ್ಲಿ ಎಸ್ಐಟಿ ತಂಡ ಹಳೆಯ ಕಡತಗಳನ್ನು ಪರಿಶಿಲಿಸಿ ತನಿಖೆ ನಡೆಸುತ್ತಿದೆ.

ಹಲವು ವರ್ಷಗಳ ಪ್ರಕರಣಗಳನ್ನು ಪರಿಶೀಲಿಸುವುದು ಮತ್ತು ತನಿಖೆ ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ. ಈ ಕಾರಣಕ್ಕೆ ಎಸ್ಐಟಿ ತಂಡ ಬೆಳ್ತಂಗಡಿಯಲ್ಲಿ ಪ್ರತ್ಯೇಕ ಕಚೇರಿಯನ್ನೇ ತೆರೆದಿದೆ. ಬೆಳ್ತಂಗಡಿ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ವಿಚಾರಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತ್ಯೇಕ ಕಚೇರಿ ತೆರೆದಿದೆ.

ಶವಗಳನ್ನು ಹೂತಿಟ್ಟ ಪ್ರಕರಣದ ಜೊತೆಗೆ ಸಾರ್ವಜನಿಕರಿಗೂ ಇದಕ್ಕೆ ಸಂಬಂಧಿಸಿದಂತೆ ದೂರುಗಳನ್ನು ನೀಡಲು ಅನುಕೂಲವಾಗುವಂತೆ ಕಚೇರಿ ಆರಂಭಿಸಲಾಗಿದೆ. ಈ ಮೂಲಕ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments