Webdunia - Bharat's app for daily news and videos

Install App

ಎಸ್‌ಐಟಿ ಕಸ್ಟಡಿ ಮುಕ್ತಾಯ: ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್‌ ರೇವಣ್ಣ ಸ್ಥಳಾಂತರ

Sampriya
ಸೋಮವಾರ, 10 ಜೂನ್ 2024 (15:45 IST)
ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಅವರಿಗೆ  ಜೂನ್‌ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಸವನಗುಡಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಬಳಿಕ ಪ್ರಜ್ವಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದೆ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ವಿಚಾರಣೆ ವೇಳೆ ಪೊಲೀಸರಿಂದ ತೊಂದರೆ ಆಯ್ತಾ ಎಂದು ಪ್ರಜ್ವಲ್‌ಗೆ ಜಡ್ಜ್ ಪ್ರಶ್ನೆ ಕೇಳಿದ್ದು, ಇದಕ್ಕೆ ಏನೂ ತೊಂದರೆ ಆಗಿಲ್ಲ ಸ್ವಾಮಿ ಎಂದು ಉತ್ತರಿಸಿದ್ದಾರೆ. ನಂತರ ಎಸ್ಐಟಿಯಿಂದ ಮೆಡಿಕಲ್‌ ಟೆಸ್ಟ್ ಹಾಗೂ ಇನ್ನಿತರ ಮಾಹಿತಿ ಪಡೆದು ಪ್ರಜ್ವಲ್‌ಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಸೂಚಿಸಿದ್ದಾರೆ.

10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ. ಹೀಗಾಗಿ ಪ್ರಜ್ವಲ್‌ ರೇವಣ್ಣನನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವ ದಾಖಲೆ ಬರೆದ ಕಾಂಗ್ರೆಸ್ ಶಕ್ತಿ ಯೋಜನೆ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್

ಮಲೆ ಮಹದೇಶ್ವರದಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಪ್ರದೇಶದಲ್ಲೇ ಮತ್ತೊಂದು ಆಘಾತಕಾರಿ ಘಟನೆ

ಸಂಕಷ್ಟಕ್ಕೆ ಬಾರದ ಸಿದ್ದರಾಮಯ್ಯನವರು ಬೆಳಗಾವಿಗೆ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ: ಅಶೋಕ

ಗುತ್ತಿಗೆದಾರರ ಪತ್ರ ಓದಿ ನಿಮಗೆ ನಾಚಿಕೆ ಆಗಲಿಲ್ಲವೇ: ಸಿ.ಟಿ.ರವಿ

ಸಿಎಂ, ಡಿಸಿಎಂಗೆ ಜವಾಬ್ಧಾರಿ ಇದ್ದಿದ್ದರೆ ಅತಿವೃಷ್ಟಿಗೆ ಪರಿಹಾರ ಒದಗಿಸುತ್ತಿದ್ದರು: ಆರ್ ಅಶೋಕ

ಮುಂದಿನ ಸುದ್ದಿ