Webdunia - Bharat's app for daily news and videos

Install App

ಎಸ್ಐಟಿಯಿಂದ ಅಜ್ಞಾತ ಸ್ಥಳದಲ್ಲಿ ಕುಣಿಗಲ್ ಗಿರಿ ವಿಚಾರಣೆ

Webdunia
ಶನಿವಾರ, 16 ಸೆಪ್ಟಂಬರ್ 2017 (16:22 IST)
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕೆ ವ್ಯಕ್ತವಾದವರನ್ನ ಎಸ್`ಐಟಿ ಅಧಿಕಾರಿಗಳು ತನಿಖೆಗೆ ಒಳಪಡಿಸುತ್ತಿದ್ದಾರೆ. ಇವತ್ತು ರೌಡಿ ಶೀಟರ್ ಕುಣಿಗಲ್ ಗಿರಿಯನ್ನ ತನಿಖೆಗೆ ಒಳಪಡಿಸಿದ್ದಾರೆಂದು ವರದಿಯಾಗಿದೆ.

ಗೌರಿ ಲಂಕೇಶ್ ಹತ್ಯೆಯಾದ ದಿನ ಕುಣಿಗಲ್ ಗಿರಿ ರಾಮನಗರ ಜೈಲಿನಲ್ಲಿದ್ದರು. ನಿನ್ನೆ ಬಿಡುಗಡೆಯಾಗಿದ್ದಾರೆ. ಆದರೆ, ಕುಣಿಗಲ್ ಗಿರಿ ಸಹಚರರ ಮೇಲಿನ ಶಂಕೆ ಹಿನ್ನೆಲೆಯಲ್ಲಿ ಎಸ್`ಐಟಿ ಕುಣಿಗಲ್ ಗಿರಿ ಕುರಿತಂತೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಂದದನ್ನ ಗಮನಿಸಿದ ಕುಣಿಗಲ್ ಗಿರಿ ನಿನ್ನೆ ಸ್ವಯಂಪ್ರೇರಿತರಾಗಿ ಸಿಐಡಿ ಕಚೇರಿ ಆವರಣದಲ್ಲಿರುವ ಎಸ್ಯಟಿ ಕಚೇರಿಗೆ ಪೋಷಕರ ಸಮೇತರಾಗಿ ಭೇಟಿ ನೀಡಿದ್ದರು. ಆದರೆ, ನಿನ್ನೆ ಅಧಿಕಾರಿಗಳ ಭೇಟಿ ಸಾಧ್ಯವಾಗಿರಲಿಲ್ಲ. ಹೀಗಾಗಿ, ಇವತ್ತು ಕುಣಿಗಲ್ ಗಿರಿಯನ್ನ ಕರೆಸಿಕೊಂಡಿರುವ ಎಸ್ಐಟಿ ತಂಡ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದೆ ಎಂದು ವರದಿಯಾಗಿದೆ.

ನಿನ್ನೆ ಎಸ್`ಐಟಿ ಕಚೇರಿಗೆ ಬಂದಿದ್ದ ಕುಣಿಗಲ್ ಗಿರಿ ಪ್ರಕರಣದಲ್ಲಿ ನನ್ನ ಕೈವಾಡವಿಲ್ಲ. ಮಾಧ್ಯಮಗಳಲ್ಲಿ ವರದಿ ನೋಡಿ ನನ್ನ ಪೋಷಕರು ಆತಂಕಗೊಂಡಿದ್ದರು. ಹೀಗಾಗಿ, ಸ್ಪಷ್ಟನೆ ನೀಡಲು ಇಲ್ಲಿಗೆ ಬಂದಿದ್ದೇನೆ. ಇವತ್ತು ತಾನೇ ಜೈಲಿನಿಂದ ರಿಲೀಸ್ ಆಗಿದ್ದು, 7-8 ವರ್ಷಗಳ ಬಳಿಕ ಊರಿಗೆ ತೆರಳುತ್ತಿದ್ದೇನೆ. ಕೃಷಿ ಮಾಡಿಕೊಂಡು ಬದುಕುತ್ತೇನೆಂದು ಹೇಳಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments