Webdunia - Bharat's app for daily news and videos

Install App

ರೇಖಾಚಿತ್ರ ಬಿಡುಗಡೆಯಾದ್ರೂ ಸಿಕ್ಕಿಲ್ಲ ಹಂತಕರ ಸುಳಿವು

Webdunia
ಶುಕ್ರವಾರ, 20 ಅಕ್ಟೋಬರ್ 2017 (18:43 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯಾಗಿ 40 ದಿನ ಕಳೆದಿದೆ. ಭಾನುವಾರ, ಸರ್ಕಾರಿ ರಜೆ, ದೀಪಾವಳಿ ರಜೆ ಸಂದರ್ಭದಲ್ಲಿಯೂ ನಿರಂತರವಾಗಿ ಹುಡುಕಾಟ ನಡೆಸಿದರೂ ಹಂತಕರ ಸುಳಿವು ಮಾತ್ರ ಪತ್ತೆಯಾಗಿಲ್ಲ. ಅಧಿಕಾರಿಗಳಿಗೆ ಕೇವಲ ಬಿಟ್ಟಿ ಸಲಹೆಗಳು ಬಿಟ್ಟರೆ ಹಂತಕರ ಪತ್ತೆಗೆ ನಿಖರ ಸುಳಿವು ಸಾರ್ವಜನಿಕರಿಂದ ಸಿಕ್ಕಿಲ್ಲ.

ಕಳೆದ ವಾರ ಎಸ್ಐಟಿ ತಂಡ ಮೂವರು ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿತ್ತು. 100ಕ್ಕೂ ಅಧಿಕ ಅಧಿಕಾರಿಗಳು ಹಂತಕರ ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲೂ ಕೂಡ ಪೊಲೀಸರು ಹಂತಕರಿಗಾಗಿ ಶೋಧ ನಡೆಸುತ್ತಿದ್ದಾರೆ. ಆದರೂ ಹಂತಕರ ಸುಳಿವಿಲ್ಲ.

ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಯಾದ ಬಳಿಕ ಎಸ್‍ಐಟಿ ನೀಡಿದ್ದ ದೂರವಾಣಿ ಸಂಖ್ಯೆಗೆ ಇದುವರೆಗೆ 500 ಕರೆಗಳು ಬಂದಿವೆ ಎನ್ನಲಾಗಿದೆ. ಆದರೆ ಅದ್ಯಾವುದೂ ಹಂತಕರ ಪತ್ತೆಗೆ ಸಣ್ಣ ಸುಳಿವು ಕೂಡ ನೀಡಿಲ್ಲ. ಎಸ್‍ಐಟಿ ಅಧಿಕಾರಿಗಳಿಂದಲೇ ಕರೆ ಮಾಡಿದವರು ಮಾಹಿತಿ ಕೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments