Webdunia - Bharat's app for daily news and videos

Install App

ಜೈಲಿನಲ್ಲಿರುವ ಆರ್‌ಆರ್‌ನಗರ ಶಾಸಕ ಮುನಿರತ್ನ ಮನೆ ಮೇಲೆ ಎಸ್‌‍ಐಟಿ ದಿಢೀರ್‌ ದಾಳಿ

Sampriya
ಶನಿವಾರ, 28 ಸೆಪ್ಟಂಬರ್ 2024 (14:29 IST)
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಇಂದು ಎಸ್‌‍ಐಟಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನ ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ಏಕಕಾಲಕ್ಕೆ ಈ ದಾಳಿ ನಡೆಸಿದೆ.

ಇಂದು ಮುಂಜಾನೆ ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ಅವರ ನಿವಾಸ, ಕಚೇರಿ ಸೇರಿದಂತೆ ವಿವಿಧೆಡೆ ಎಫ್ಎಸ್ಎಲ್​ ತಂಡದೊಂದಿಗೆ ತೆರಳಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮೊದಲು ಮುನಿರತ್ನ ಬಂಧನವಾಗಿತ್ತು. ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅದಾದ ಮರುದಿನವೇ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು.

ಈ ನಡುವೆ ಮುನಿರತ್ನ ಅವರ ವಿರುದ್ಧ ಒಂದೊಂದೆ ಪ್ರಕರಣಗಳು ಹೊರ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಎಸ್‌‍ಐಟಿ ರಚಿಸಿತ್ತು. ಇದೀಗ ಸಿಐಡಿಯ ವಿಶೇಷ ತನಿಖಾ ದಳದ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಮುನಿರತ್ನ ಅವರನ್ನು ತಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಈ ನಡುವೆ ಪ್ರಕರಣದ ಬೆನ್ನು ಬಿದ್ದಿರುವ ಎಸ್‌‍ಐಟಿ ಅಧಿಕಾರಿಗಳು, ಮುನಿರತ್ನ ಅವರ ನಿವಾಸ ಮತ್ತವರ ಸಂಬಂಧಿಕರು, ಸ್ನೇಹಿತರ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments