Webdunia - Bharat's app for daily news and videos

Install App

ಧರ್ಮಸ್ಥಳ ಬುರುಡೆ ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತರುತ್ತಿರುವ ಪೊಲೀಸರು

Krishnaveni K
ಶನಿವಾರ, 30 ಆಗಸ್ಟ್ 2025 (12:06 IST)
ಬೆಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣದ ಚಿನ್ನಯ್ಯನನ್ನು ಪೊಲೀಸರು ಈಗ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಇದಕ್ಕೆ ಕಾರಣವೂ ಇದೆ.

ಬೆಳ್ತಂಗಡಿ ಠಾಣೆಯಲ್ಲಿ ಚಿನ್ನಯ್ಯನನ್ನು ಇದುವರೆಗೆ ಇರಿಸಿ ವಿಚಾರಣೆ ನಡೆಸಲಾಗುತ್ತಿತ್ತು. ಈ ವೇಳೆ ಎಸ್ಐಟಿ ಅಧಿಕಾರಿಗಳ ಮುಂದೆ ಚಿನ್ನಯ್ಯ ಸಾಕಷ್ಟು ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ. ಬುರುಡೆ ಗ್ಯಾಂಗ್ ನಿರ್ದೇಶನದ ಮೇರೆಗೇ ಈ ಕೆಲಸ ಮಾಡಿದ್ದಾಗಿ ಹೇಳಿದ್ದ.

ಅದರಂತೆ ತಾನು ಈ ಮೊದಲು ತಂದಿದ್ದ ಬುರುಡೆ ಎಲ್ಲಿಂದ ತಂದಿದ್ದು, ಯಾರು ಕೊಟ್ಟಿದ್ದು ಎಂದೂ ಹೇಳಿದ್ದ. ಈ ವೇಳೆ ಆತ ಬುರುಡೆಯನ್ನು ಬೆಂಗಳೂರಿಗೆ ತೆಗೆದುಕೊಂಡಿದ್ದಾಗಿ ಹೇಳಿದ್ದ. ಹೀಗಾಗಿ ಪೊಲೀಸರು ಈಗ ಬೆಂಗಳೂರಿಗೆ ಸ್ಥಳ ಮಹಜರು ನಡೆಸಲು ಆತನನ್ನು ಕರೆದುಕೊಂಡು ಬರುತ್ತಿದ್ದಾರೆ. ಈ ಮೊದಲು ಆತನನ್ನು ತಮಿಳುನಾಡು ಅಥವಾ ಮಂಡ್ಯಕ್ಕೆ ಕರೆದೊಯ್ದಿರಬಹುದು ಎನ್ನಲಾಗಿತ್ತು.

ಆತ ವಿಚಾರಣೆ ವೇಳೆ ಸಾಕಷ್ಟು ವಿಚಾರಗಳನ್ನು ಹೇಳಿದ್ದಾನೆ. ಬುರುಡೆ ಗ್ಯಾಂಗ್ ತನ್ನನ್ನು ಯಾವೆಲ್ಲಾ ಸ್ಥಳಗಳಿಗೆ ಕರೆದೊಯ್ದಿತ್ತು. ಬುರುಡೆ ಎಲ್ಲಿಂದ ತರಲಾಗಿತ್ತು ಎಂದು ಹೇಳಿದ್ದ. ಹೀಗಾಗಿ ಈಗ ಆ ಎಲ್ಲಾ ಸ್ಥಳಗಳಿಗೆ ತೆರಳಿ ಮಹಜರು ನಡೆಸುವ ಸಾಧ್ಯತೆಯಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡು ಮುಟ್ಟದ ಸೊಪ್ಪಿಲ್ಲ, ಕಾಂಗ್ರೆಸ್ ಬೆಲೆ ಏರಿಕೆ ಮಾಡದ ಕ್ಷೇತ್ರವಿಲ್ಲ: ಆರ್ ಅಶೋಕ್ ಲೇವಡಿ

ಧರ್ಮಸ್ಥಳ ಬುರುಡೆ ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತರುತ್ತಿರುವ ಪೊಲೀಸರು

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ವಿಷ್ಣುವರ್ಧನ್ ಸಮಾಧಿ ಬಗ್ಗೆ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments