Webdunia - Bharat's app for daily news and videos

Install App

ರೇವಣ್ಣ ಮನೆಗೆ ಸಂತ್ರಸ್ತೆಯ ಕರೆತಂದ ಎಸ್ ಐಟಿ: ಇಂದೇ ಎಚ್ ಡಿ ರೇವಣ್ಣ ಬಂಧನ ಸಾಧ್ಯತೆ

Krishnaveni K
ಶನಿವಾರ, 4 ಮೇ 2024 (13:50 IST)
Photo Courtesy: facebook
ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಎಂಪಿ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್ ಡಿ ರೇವಣ್ಣ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಳಿಸಿದೆ.

ಇಂದು ರೇವಣ್ಣ ಮನೆಗೆ ಎಸ್ಐಟಿ ತಂಡ ಸಂತ್ರಸ್ತ ಮಹಿಳೆಯನ್ನು ಕರೆತಂದಿದ್ದಾರೆ. ಮಹಿಳೆಯನ್ನು ರೇವಣ್ಣ ಅವರ ಹೊಳೆನರಸೀಪುರ ದಮನೆಗೆ ಕರೆತಂದು ಸ್ಥಳ ಮಹಜರು ಮಾಡಿದ್ದಾರೆ. ಈ ವೇಳೆ ಮಾಧ‍್ಯಮಗಳು, ಸಾರ್ವಜನಿಕರು ಮನೆಯ ಒಳಗೆ ಪ್ರವೇಶಿಸಿದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.

ಲ್ಯಾಪ್ ಟಾಪ್, ಸ್ಕ್ಯಾನರ್, ಪ್ರಿಂಟರ್ ಗಳನ್ನೂ ಎಸ್ಐಟಿ ತಂಡ ತೆಗೆದುಕೊಂಡುಬಂದಿದೆ. ಪೊಲೀಸರ ತಂಡ ರೇವಣ್ಣ ಮನೆಯಲ್ಲಿ ತೀವ್ರ ಶೋಧ ನಡೆಸಿದೆ. ಈ ಪ್ರಿಂಟರ್ ಗಳನ್ನು ತೆಗೆದುಕೊಂಡು ಬಂದಿದ್ದರ ಹಿಂದಿನ ಕಾರಣವೇನೆಂದು ತಿಳಿದುಬಂದಿಲ್ಲ.

ಇನ್ನೊಂದೆಡೆ ಎಚ್ ಡಿ ರೇವಣ್ಣ ವಿರುದ್ಧ ಮನೆಕೆಲಸದಾಕೆಗೆ ಲೈಂಗಿಕ ದೌರ್ಜನ್ಯ, ಓರ್ವ ಮಹಿಳೆಯ ಅಪಹರಣ ಪ್ರಕರಣ ದಾಖಲಾಗಿದೆ. ಹೀಗಾಗಿ ಎಚ್ ಡಿ ರೇವಣ್ಣ ಬಂಧನಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಸೂಕ್ತ ದಾಖಲೆಗಳನ್ನು ಪಡೆದು ರೇವಣ್ಣನನ್ನು ಬಂಧಿಸಲು ಎಸ್ಐಟಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಈ ನಡುವೆ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು ಇಂದು ಅದರ ನಿರ್ಣಯ ತಿಳಿದುಬರಲಿದೆ. ಸದ್ಯಕ್ಕೆ ಅವರು ಮಾಧ‍್ಯಮಗಳು, ಸಾರ್ವಜನಿಕರ ಕಣ್ಣಿಗೆ ಕಾಣಿಸಿಕೊಳ್ಳುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ