ಧರ್ಮಸ್ಥಳ ಅನಾಮಿಕ ದೂರುದಾರನ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಎಸ್ಐಟಿ

Krishnaveni K
ಮಂಗಳವಾರ, 19 ಆಗಸ್ಟ್ 2025 (10:17 IST)
ಮಂಗಳೂರು: ಧರ್ಮಸ್ಥಳದಲ್ಲಿ ಅನಾಮಿಕ ದೂರುದಾರನ ಬಗ್ಗೆ ಎಸ್ಐಟಿ ತಂಡ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಅನಾಮಿಕ ದೂರುದಾರ ತಪ್ಪೊಪ್ಪಿಕೊಂಡ ಹಿನ್ನಲೆಯಲ್ಲೇ ಎಸ್ಐಟಿ ಮಹತ್ವದ ನಿರ್ಧಾರ ಮಾಡಿದೆ.

ಅನಾಮಿಕ ಹೇಳಿದಂತೆ ಒಂದು ಪಾಯಿಂಟ್ ಬಿಟ್ಟು ಉಳಿದ ಪಾಯಿಂಟ್ ನಲ್ಲಿ ಅಸ್ಥಿಪಂಜರ ಸಿಕ್ಕಿರಲಿಲ್ಲ. ಹೀಗಾಗಿ ವಿಪಕ್ಷಗಳೂ ಎಸ್ಐಟಿ ತನಿಖೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಶೋಧ ಕಾರ್ಯಕ್ಕೆ ಬ್ರೇಕ್ ಹಾಕಿದ್ದ ಎಸ್ಐಟಿ ನಿನ್ನೆ ಅನಾಮಿಕ ದೂರುದಾರನನ್ನೇ ವಿಚಾರಣೆಗೊಳಪಡಿಸಿತ್ತು.

ಈ ವೇಳೆ ಆತ 2014 ರಿಂದ ತಾನು ತಮಿಳುನಾಡಿನಲ್ಲಿದ್ದೆ. ಎರಡು ವರ್ಷಗಳ ಹಿಂದೆ ಒಂದು ಗುಂಪು ನನ್ನ ಬಳಿ ಬಂದು ಅಕ್ರಮವಾಗಿ ಶವ ಹೂತಿದ್ದೇನೆ ಎಂದು ಹೇಳಿಕೆ ನೀಡುವಂತೆ ಹೇಳಿತ್ತು. ಅವರ ಬಲವಂತದಿಂದ ನಾನು ದೂರು ನೀಡಲು ಬಂದೆ ಎಂದಿದ್ದ. ಇದು ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ನೀಡಿದೆ.

ಇದರ ಬೆನ್ನಲ್ಲೇ ಈಗ ಅನಾಮಿಕ ದೂರುದಾರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಎಸ್ಐಟಿ ಸಿದ್ಧತೆ ನಡೆಸಿದೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರೆ ಹೆಚ್ಚಿನ ವಿಚಾರಗಳು ಹೊರಬರಬಹುದು ಎಂದು ಎಸ್ಐಟಿ ಚಿಂತನೆ ನಡೆಸಿದೆ. ಆದರೆ ಆತ ದೂರುದಾರನಾಗಿರುವುದರಿಂದ ವಶಕ್ಕೆ ಪಡೆಯುವುದಕ್ಕೆ ಕಾನೂನು ತೊಡಕಾಗಬಹುದು. ಹೀಗಾಗಿ ಕೋರ್ಟ್ ಗೆ ವರದಿ ನೀಡಿ ಕೆಲವು ಪ್ರಬಲ ವಿಚಾರಗಳನ್ನು ಮುಂದಿಟ್ಟು ವಶಕ್ಕೆ ಪಡೆಯಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments